More

    ಕೆಲವೇ ದಿನದಲ್ಲಿ ಹಸಮಣೆ ಏರಬೇಕಿದ್ದ ಪೊಲೀಸ್​ ಪೇದೆ ದುರಂತ ಸಾವು! ಅಯ್ಯೋ, ವಿಧಿಯೇ ನೀನೆಷ್ಟು ಕ್ರೂರಿ?

    ಹುಬ್ಬಳ್ಳಿ: ಎಲ್ಲವೂ ಅಂದುಕೊಂಡತೆ ಇದ್ದರಿದ್ದರೆ ಪೊಲೀಸ್​ ಪೇದೆಯ ಮನೆಯಲ್ಲಿ ಇನ್ನು 18 ದಿನದಲ್ಲಿ ಮದುವೆ ಸಂಭ್ರಮ ಮನೆ ಮಾಡಬೇಕಿತ್ತು. ಆದರೆ ವಿಧಿಯಾಟ ಬೇರೆಯೇ ಆಗಿತ್ತು. ಟ್ರಾಫಿಕ್​ ಕ್ಲಿಯರ್​ ಮಾಡಲು ಸ್ಥಳಕ್ಕೆ ಬಂದ ಕರ್ತವ್ಯನಿರತ ಪೊಲೀಸ್​ ಪೇದೆಯ ಪ್ರಾಣವನ್ನ ಲಾರಿ ರೂಪದಲ್ಲಿ ಬಂದ ಜವರಾಯ ಹೊತ್ತೊಯ್ದಿದ್ದಾನೆ. ಪೇದೆ ಜತೆಗೆ ಮತ್ತೊಬ್ಬನೂ ಮೃತಪಟ್ಟಿದ್ದು, ಅಪಘಾತದ ಭೀಕರತೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.

    ಇಂತಹ ದುರ್ಘಟನೆ ಮಂಗಳವಾರ ರಾತ್ರಿ ಹುಬ್ಬಳ್ಳಿ- ಕಾರವಾರ ರಸ್ತೆ ಬುಡನಾಳ ಕ್ರಾಸ್ ಬಳಿ ಸಂಭವಿಸಿದೆ. ಪೊಲೀಸ್​ ಪೇದೆ ಪಂಡಿತ ಕಾಸರ್(28) ಹಾಗೂ ಮತ್ತೊಬ್ಬ ಬೈಕ್ ಸವಾರ ಮೃತರು. ಮತ್ತೊಬ್ಬ ಕಾನ್ಸ್‌ಟೇಬಲ್ ಹಾಗೂ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.

    ಕಲಘಟಗಿ ತಾಲೂಕಿನ ಸಂಗಮೇಶ್ವರ ಗ್ರಾಮದ ನಿವಾಸಿ ಪಂಡಿತ ಕಾಸರ್​ ಅವರು ಮೂರು ವರ್ಷದ ಹಿಂದೆ ಸೇವೆಗೆ ಸೇರಿದ್ದರು. ಏಪ್ರಿಲ್ 23ರಂದು ಅವರ ವಿವಾಹ ನಿಗದಿಯಾಗಿತ್ತು. ಮಂಗಳವಾರ ಬೆಳಗ್ಗೆ ಹುಬ್ಬಳ್ಳಿಗೆ ಬಂದು ಚಿನ್ನಾಭರಣ ಖರೀದಿಸಿದ್ದರು ಎಂದು ಅವರ ಸಹೋದ್ಯೋಗಿಗಳು ಕಣ್ಣೀರು ಹಾಕಿದರು.

    ಮಂಗಳವಾರ ರಾತ್ರಿ ಹುಬ್ಬಳ್ಳಿ ತಾಲೂಕಿನ ಬುಡನಾಳ ಕ್ರಾಸ್ ಬಳಿ ಮಳೆ- ಗಾಳಿಯಿಂದ ರಸ್ತೆಯಲ್ಲಿ ಮರ ಉರುಳಿ ಬಿದ್ದಿತ್ತು. ಪರಿಣಾಮ ಹುಬ್ಬಳ್ಳಿ-ಕಾರವಾರ ರಸ್ತೆಯಲ್ಲಿ ಟ್ರಾಫಿಕ್ ಉಂಟಾಗಿ, ಬೈಕ್ ಅಪಘಾತಕ್ಕೀಡಾಗಿತ್ತು. ಸುದ್ದಿ ತಿಳಿಯುತ್ತಿದ್ದಂತೆ ಟ್ರಾಫಿಕ್ ಕ್ಲಿಯರ್ ಮಾಡಲು ಸ್ಥಳಕ್ಕೆ ಪೊಲೀಸರು ಬಂದಿದ್ದರು. ಈ ವೇಳೆ ಲಾರಿಯೊಂದು ಡಿಕ್ಕಿ ಹೊಡೆದು ಪರಾರಿಯಾಗಿದ್ದು, ತೀವ್ರ ಗಾಯಗೊಂಡ ಪಂಡಿತ ಕಾಸರ್​ ಮತ್ತು ಬೈಕ್​ ಸವಾರ ಸೇರಿ ಇಬ್ಬರು ಮೃತಪಟ್ಟಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪ್ರೀತಿಸಿ ಮದ್ವೆಯಾದ 7 ದಿನಕ್ಕೇ ಯುವತಿ ಬೀದಿಪಾಲು! 3 ದಿನದಲ್ಲಿ 2 ಬಾರಿ ಮದ್ವೆ ಆಗಿದ್ದವ ಇದ್ದಕ್ಕಿದ್ದಂತೆ ಏನಾದ?

    ಬೆಂಗ್ಳೂರಲ್ಲಿ ಕನ್ನಡ ಮಾತನಾಡಿದ್ದಕ್ಕೆ ಯುವಕನ ಕೊಲೆ! ಸ್ಫೋಟಕ ರಹಸ್ಯ ಬಿಚ್ಚಿಟ್ಟ ಹೋಂ ಮಿನಿಸ್ಟರ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts