ಚಿಕ್ಕಮಗಳೂರು: ಇಂದು ಒಂದೇ ದಿನ ಕರ್ನಾಟಕದ ವಿವಿಧೆಡೆ ಮೂರು ಅತ್ಯಾಚಾರ ಕೇಸ್ ಬೆಳಕಿಗೆ ಬಂದಿದ್ದು, ರಾಜ್ಯದಲ್ಲಿ ಕಾಮುಕರ ಅಟ್ಟಹಾಸಕ್ಕೆ ಕೊನೇ ಇಲ್ಲವೇ? ಎಂಬ ಪ್ರಶ್ನೆ ದಟ್ಟವಾಗಿ ಕಾಡುತ್ತಿದೆ.
ಚಿಕ್ಕಮಗಳೂರು, ವಿಜಯಪುರ, ಧಾರವಾಡ ಜಿಲ್ಲೆಯಲ್ಲಿ ಮೂವರು ಬಾಲಕಿಯರ ಮೇಲೆ ಅತ್ಯಾಚಾರ ನಡೆದಿದ್ದು, ಪ್ರತ್ಯೇಕ ಕೇಸ್ ದಾಖಲಾಗಿದೆ. ಸದ್ಯ ಇಬ್ಬರು ಆರೋಪಿಗಳನ್ನ ಬಂಧಿಸಲಾಗಿದ್ದು, ಮತ್ತೊಬ್ಬ ತಲೆ ಮರೆಸಿಕೊಂಡಿದ್ದಾನೆ.
ಕಾಫಿತೋಟದಲ್ಲಿ ಬಾಲಕಿ ಮೇಲೆರಗಿದ ಕಾಮುಕ: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ನಿಡುವಾಳೆ ಗ್ರಾಮದ ಕಾಫಿ ತೋಟದಲ್ಲಿ 17 ವರ್ಷದ ಬಾಲಕಿ ಮೇಲೆ ನಿರಂಜನ್ ಎಂಬಾತ ಬಲತ್ಕಾರ ಮಾಡಿದ್ದಾನೆ. ಬಾಲಕಿ ಅಜ್ಜಿ ಮನೆಗೆ ಬಂದಿದ್ದಳು. ಈ ವೇಳೆ ತೋಟದಲ್ಲಿ ಅತ್ಯಾಚಾರವೆಸಗಿದ್ದಾನೆ. ಬಾಳೂರು ಠಾಣೆ ಪೊಲೀಸರು ಆರೋಪಿ ನಿರಂಜನ್ನನ್ನು ಬಂಧಿಸಿದ್ದಾರೆ.
ಭಿಕ್ಷೆ ಬೇಡುತ್ತಿದ್ದ ಬಾಲಕಿಗೆ ಊಟದ ಆಸೆ ತೋರಿಸಿ ಅತ್ಯಾಚಾರ: ಧಾರವಾಡ ನಗರದಲ್ಲಿ ಭಿಕ್ಷೆ ಬೇಡುತ್ತಿದ್ದ 13 ವರ್ಷದ ಬಾಲಕಿಗೆ ಎಗ್ರೈಸ್ ಮತ್ತು ಗೋಬಿ ಮಂಚೂರಿಯನ್ನು ತಿನ್ನಿಸುವ ಆಸೆ ಹುಟ್ಟಿಸಿ ತನ್ನತ್ತ ಕರೆದ ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ ಗ್ರಾಮದ ಶರಣಪ್ಪ ತಳವಾರ ಎಂಬಾತ ಆಕೆ ಮೇಲೆ ಅತ್ಯಾಚಾರವೆಸಗಿದ್ದಾನೆ. ಇತ್ತೀಚೆಗೆ ಮಕ್ಕಳ ರಕ್ಷಣಾ ಘಟಕದ ಸದದಸ್ಯರು ಭಿಕ್ಷೆ ಬೇಡುತ್ತಿದ್ದ ಬಾಲಕಿಯನ್ನು ಕರೆದೊಯ್ದು ಕೌನ್ಸೆಲಿಂಗ್ ಮಾಡುವಾಗ ಬಾಲಕಿ ತನ್ನ ಮೇಲಾದ ಅತ್ಯಾಚಾರದ ಬಗ್ಗೆ ಬಾಯ್ಬಿಟ್ಟಿದ್ದು, ಆರೋಪಿಯನ್ನ ಬಂಧಿಸಲಾಗಿದೆ.
ಪ್ರೀತಿ ನೆಪದಲ್ಲಿ ಬಾಲಕಿ ಮೇಲೆ ಅತ್ಯಾಚಾರ: ವಿಜಯಪುರ ಜಿಲ್ಲೆ ಕೂಡ್ಲಿಗಿ ಪಟ್ಟಣದ ನಿವಾಸಿ, ಕಟ್ಟಡ ಕಾರ್ಮಿಕ ಸಂತೋಷ್ ಎಂಬಾತ ಬಾಲಕಿಯೊಬ್ಬಳಿಗೆ ಪ್ರೀತಿ-ಪ್ರೇಮ ಎಂದು ತಲೆಕೆಡಿಸಿ, ಅತ್ಯಾಚಾರವೆಸಗಿದ್ದಾನೆ. ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೂಡ್ಲಿಗಿ ತಾಲೂಕಿನ ಕಾನಹೊಸಳ್ಳಿ ಠಾಣೆ ಪೊಲೀಸರು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.
ಪತ್ನಿ ಕೊಂದು ಧರ್ಮಸ್ಥಳಕ್ಕೆ ಹೋದವ ಇನ್ನಿಬ್ಬರನ್ನ ಕೊಲ್ಲಲು ವಾಪಸ್ ಬಂದ! ಬೆಚ್ಚಿಬೀಳಿಸುತ್ತೆ ಆ ರಹಸ್ಯ
ಮಕ್ಕಳೊಂದಿಗೆ ಪತ್ನಿ ನಾಪತ್ತೆ: ಆಕೆ ಸಿಗುತ್ತಿದ್ದಂತೆ ಪೊಲೀಸರಿಗೆ ಕಾದಿತ್ತು ಶಾಕ್! ಗಂಡ-ಹೆಂಡ್ತಿಯಲ್ಲ, ಆದ್ರೆ…
ಪ್ರಿಯಕರನ ಕೊಲ್ಲಲು ಮತ್ತೊಬ್ಬನೊಂದಿಗೆ ವಿವಾಹಿತೆಯ ಕಾಮದಾಟ: ಬೆಚ್ಚಿಬೀಳಿಸುತ್ತೆ ಇವಳ ಅಸಲಿ ಮುಖ!