ಹುಬ್ಬಳ್ಳಿ: ಹಿಂದೂ ಧಾರ್ಮಿಕ ಸ್ಥಳಗಳಲ್ಲಿ ಕ್ರೈಸ್ತರ ಹೊಸ ವರ್ಷ ಆಚರಣೆ ಮಾಡಬಾರದು. ಒಂದು ವೇಳೆ ಮಾಡಿದ್ರೆ ಧರಣಿ ನಡೆಸಲಾಗುವುದು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಎಚ್ಚರಿಸಿದ್ದಾರೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್, ಹಿಂದುಗಳಿಗೆ ಯುಗಾದಿಯಂದು ಹೊಸ ವರ್ಷ ಆರಂಭವಾಗುತ್ತದೆ. ಹಾಗಾಗಿ ಕ್ರೈಸ್ತರ ಹೊಸ ವರ್ಷಾಚರಣೆ ಮಾಡದಂತೆ ಧರ್ಮಸ್ಥಳ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಮತ್ತು ಆರ್ಟ್ ಆಫ್ ಲಿವಿಂಗ್ನ ರವಿಶಂಕರ ಗುರೂಜಿ ಹಾಗೂ ಇಸ್ಕಾನ್ನ ಮಧುದಾಸ ಪಂಡಿತ ಅವರಿಗೆ ಪತ್ರ ಬರೆದು ಮನವಿ ಮಾಡಲಾಗಿದೆ ಎಂದರು.
ಹಿಂದೂ ಧರ್ಮಕ್ಕೆ ವಿರುದ್ಧವಾಗಿ ಹಿಂದೂ ಧಾರ್ಮಿಕ ಸ್ಥಳಗಳಲ್ಲಿ ಕ್ರೈಸ್ತರ ಹೊಸ ವರ್ಷಾಚರಣೆ ಮಾಡಬಾರದು. ಬೆಂಗಳೂರಿನ ಇಸ್ಕಾನ್, ಶ್ರೀ ಶ್ರೀ ರವಿಶಂಕರ ಗುರೂಜಿ ಅವರ ಆಶ್ರಮ (ಆರ್ಟ್ ಆಫ್ ಲೀವಿಂಗ್) ಹಾಗೂ ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಡಿ. 31 ರಂದು ಹೊಸ ವರ್ಷಾಚರಣೆ ಕಾರ್ಯಕ್ರಮ ಆಯೋಜಿಸಿದರೆ ಈ ಮೂರು ಸ್ಥಳಗಳಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತೇವೆ ಎಂದು ಮುತಾಲಿಕ್ ಎಚ್ಚರಿಸಿದರು.
ಮಗನನ್ನು ಅಂಗನವಾಡಿಗೆ ಸೇರಿಸಿದ ಕೊಪ್ಪಳದ ಕುಷ್ಟಗಿ ಜಡ್ಜ್! ಕಾರಣ ಕೇಳಿದ್ರೆ ಮೆಚ್ಚಿಕೊಳ್ತೀರಿ…
29 ವರ್ಷದ ಬಳಿಕ ಕಪ್ಪುಕೋಟ್ ಧರಿಸಿ ವಾದ ಮಂಡಿಸಿದ ಎಸ್ಪಿಎಂ! ಕಿಕ್ಕಿರಿದು ತುಂಬಿದ್ದ ಕೋರ್ಟ್ ಹಾಲ್
ನಂಜನಗೂಡಲ್ಲಿ ಅಪ್ರಾಪ್ತನ ಜತೆ 3 ಮಕ್ಕಳ ತಾಯಿ ಲವ್ವಿಡವ್ವಿ! ಇವಳ ಆಸೆ ಕೇಳಿದ್ರೆ ಬೆಚ್ಚಿಬೀಳ್ತೀರಿ