More

    ಜೈಲಿನಿಂದ ತಪ್ಪಿಸಿಕೊಂಡಿದ್ದ ವಿಚಾರಣಾಧೀನ ಕೈದಿ, ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

    ಹುಬ್ಬಳ್ಳಿ: ಜೈಲಿನಿಂದ ತಪ್ಪಿಸಿಕೊಂಡಿದ್ದ ವಿಚಾರಣಾಧೀನ ಕೈದಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಣ್ಣಿಗೇರಿ ರೈಲು ನಿಲ್ದಾಣದ ಬಳಿ ನಡೆದಿದೆ.

    ಹುಬ್ಬಳ್ಳಿಯ ಆನಂದ‌ನಗರದ ವಿಜಯ ನರೇಗಲ್ (29) ಆತ್ಮಹತ್ಯೆ ಮಾಡಿಕೊಂಡ ಕೈದಿ. ಆಗಸ್ಟ್‌ 01 ರಂದು ಇಲ್ಲಿನ ವಿಶ್ವೇಶ್ವರಯ್ಯ ನಗರದ ಉಪ ಕಾರಾಗೃಹದಿಂದ ತಪ್ಪಿಸಿಕೊಂಡಿದ್ದನು. ಈ ಸಂಬಂಧ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಪತ್ತೆಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದರು.

    ಇದನ್ನೂ ಓದಿ: ಸೆಮಿಫೈನಲ್ ಪ್ರವೇಶಿಸಿದ ಕುಸ್ತಿಪಟುಗಳು, ಪದಕಕ್ಕೆ ಒಂದೇ ಹೆಜ್ಜೆ

    ಆದರೆ ಮಂಗಳವಾರ ರಾತ್ರಿ ರೈಲು ಹಳಿಗೆ ತಲೆ‌ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಳಗ್ಗೆ ವಿಷಯ ಗೊತ್ತಾಗಿದ್ದು, ಗದಗ ರೈಲ್ವೆ ಹಾಗೂ ಹುಬ್ಬಳ್ಳಿ ಅಶೋಕನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ರಶ್ಮಿಕಾ ಮಾಡಿದ ಈ ಕೆಲಸಕ್ಕೆ ಪೋಷಕರಿಗೆ ಬೇಜಾರು… ಕಾರಣ ಏನ್​ ಗೊತ್ತಾ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts