PSI ಹುದ್ದೆ ನೇಮಕಾತಿಯಿಂದ ವಂಚಿತರಾದ ಅಭ್ಯರ್ಥಿಗಳಿಂದ HDK ಕಾರಿಗೆ ಮುತ್ತಿಗೆ ಹಾಕಲು ಯತ್ನ

ಧಾರವಾಡ: ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಅವರ ಕಾರಿಗೆ ಪಿಎಸ್‌ಐ ಹುದ್ದೆ ನೇಮಕಾತಿಯಿಂದ ವಂಚಿತರಾದ ಅಭ್ಯರ್ಥಿಗಳು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಶನಿವಾರ ಸಂಭವಿಸಿದೆ. ಸಮಾನ ಕೆಲಸಕ್ಕೆ ಸಮಾನ ವೇತನಕ್ಕೆ ಆಗ್ರಹಿಸಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕಳೆದ ಒಂದು ವಾರದಿಂದ ಅತಿಥಿ ಉಪನ್ಯಾಸಕರು ಧರಣಿ ನಡೆಸುತ್ತಿದ್ದಾರೆ. ಇವರ ಸಮಸ್ಯೆ ಆಲಿಸಲು ಎಚ್​ಡಿಕೆ ಆಗಮಿಸಿದ್ದರು. ಈ ವೇಳೆ ಜಮಾಯಿಸಿದ ಪಿಎಸ್​ಐ ಹುದ್ದೆ ವಂಚಿತ ಅಭ್ಯರ್ಥಿಗಳು, ನಮಗೆ ನ್ಯಾಯ ಕೊಡಿಸಿ ಎಂದು ಎಚ್​ಡಿಕೆ ಜೊತೆ ಮಾತಿನ ಚಕಮಕಿ ನಡೆಸಿದರು. ವಾಪಸ್​ ಎಚ್​ಡಿಕೆ … Continue reading PSI ಹುದ್ದೆ ನೇಮಕಾತಿಯಿಂದ ವಂಚಿತರಾದ ಅಭ್ಯರ್ಥಿಗಳಿಂದ HDK ಕಾರಿಗೆ ಮುತ್ತಿಗೆ ಹಾಕಲು ಯತ್ನ