ಬೆಂಗಳೂರು: ಸ್ಯಾಂಡಲ್ವುಡ್ನ ಪುನೀತ್ ರಾಜ್ಕುಮಾರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವಿಕ್ರಂ ಆಸ್ಪತ್ರೆ ಬಳಿ ಅಪ್ಪು ಕುಟುಂಬಸ್ಥರು, ಸಿನಿಮಾ ರಂಗದ ಗಣ್ಯರು, ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿದ್ದಾರೆ.
ಕ್ಷಣಕ್ಷಣಕ್ಕೂ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿದ್ದು, ಪುನೀತ್ ಅವರ ಮನೆ ಹಾಗೂ ವಿಕ್ರಂ ಆಸ್ಪತ್ರೆ ಬಳಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಶಿವರಾಜ್ಕುಮಾರ್ ಅವರ ‘ಭಜರಂಗಿ 2’ ಸಿನಿಮಾ ಇಂದು ತೆರೆಕಂಡಿದ್ದು, ಕುಟುಂಬಸ್ಥರು ಸಿನಿಮಾವನ್ನ ಥಿಯೇಟರ್ ಸಿನಿಮಾ ನೋಡುತ್ತಿದ್ದರು. ಪುನೀತ್ಗೆ ಹೃದಯಾಘಾತ ಆಗಿರುವ ಸುದ್ದಿ ತಿಳಿಯುತ್ತಿದ್ದಂತೆ ಎಲ್ಲರೂ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ನಟ ಶಿವರಾಜ್ಕುಮಾರ್ ಅವರು ಕಣ್ಣೀರು ಹಾಕುತ್ತಲೇ ಆಸ್ಪತ್ರೆಗೆ ಬಂದರು. ರಾಘವೇಂದ್ರ ರಾಜ್ಕುಮಾರ್ ಕೂಡ ಆಸ್ಪತ್ರೆಯಲ್ಲೇ ಇದ್ದಾರೆ. ಶೃತಿ, ರವಿಚಂದ್ರನ್, ಯಶ್, ರಾಕ್ಲೈನ್ ವೆಂಕಟೇಶ್ ಸೇರಿದಂತೆ ಕನ್ನಡ ಚಿತ್ರರಂಗದ ನಟ-ನಟಿಯರು ಕಣ್ಣೀರು ಹಾಕುತ್ತಲೇ ಆಗಮಿಸುತ್ತಿದ್ದ ದೃಶ್ಯ ಅಭಿಮಾನಿಗಳಲ್ಲಿ ಆತಂಕ ಹುಟ್ಟಿಸಿದೆ.
ಅಪ್ಪು ಅವರ ಆರೋಗ್ಯ ಸ್ಥಿತಿ ಕುರಿತು ವಿಕ್ರಂ ಆಸ್ಪತ್ರೆ ವೈದ್ಯರು ಇಂದು ಮಧ್ಯಾಹ್ನ 3 ಗಂಟೆಗೆ ಹೆಲ್ತ್ ಬುಲೆಟಿಬ್ ಬಿಡುಗಡೆ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.