‘ಅಪ್ಪು’ಗೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಯುವಕ ಆತ್ಮಹತ್ಯೆ: ಅಭಿಮಾನಿಗಳೇ ದಯವಿಟ್ಟು ದುಡುಕಬೇಡಿ…

ಚಿಕ್ಕೋಡಿ: ಪವರ್​ ಸ್ಟಾರ್ ಪುನೀತ್​ ರಾಜ್​ಕುಮಾರ್​ ಅವರ ಸಾವಿನ ಸುದ್ದಿ ಕೇಳಿ ಕಂಗೆಟ್ಟ ಅಭಿಮಾನಿಯೊಬ್ಬ, ನೇಣಿಗೆ ಶರಣಾಗಿದ್ದಾನೆ. ಸಾವಿಗೂ ಮುನ್ನ ಪುನೀತ್​ಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿ, ಬಳಿಕ ದುಡುಕಿನ ನಿರ್ಧಾರ ಕೈಗೊಂಡ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ಅಥಣಿ ಪಟ್ಟಣದ ವಡ್ಡರಗಲ್ಲಿಯ ರಾಹುಲ ಗಾಡಿವಡ್ಡರ(22) ಮೃತ. ಪುನೀತ್​ ಇನ್ನಿಲ್ಲ ಎಂಬ ಸುದ್ದಿ ಕೇಳಿ ತೀವ್ರ ನೊಂದಿದ್ದ ರಾಹುಲ, ತನ್ನ ಸ್ನೇಹಿತರೊಂದಿಗೆ ‘ಅಪ್ಪು’ ಬ್ಯಾನರ್​ ಹಾಕಿ ಶ್ರದ್ಧಾಂಜಲಿ ಸಲ್ಲಿಸಿದ್ದ. ಬಳಿಕ ಮನೆಗೆ ಬಂದು ನೇಣಿಗೆ ಕೊರಳೊಡ್ಡಿದ್ದಾನೆ. … Continue reading ‘ಅಪ್ಪು’ಗೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಯುವಕ ಆತ್ಮಹತ್ಯೆ: ಅಭಿಮಾನಿಗಳೇ ದಯವಿಟ್ಟು ದುಡುಕಬೇಡಿ…