ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಅಗಲಿಕೆ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಬೆಂಗಳೂರಲ್ಲಿ ಭಾನುವಾರದವರೆಗೂ ಬಾರ್ ಮತ್ತು ಪಬ್ಗಳನ್ನ ಬಂದ್ ಮಾಡುವಂತೆ ಆದೇಶ ಹೊರಡಿಸಲಾಗಿದೆ.
ಸ್ಯಾಂಡಲ್ವುಡ್ನ ಪುನೀತ್ ರಾಜ್ಕುಮಾರ್ ಅವರ ನಿಧನದ ಸುದ್ದಿಯನ್ನ ಕನ್ನಡಿಗರು ಮಾತ್ರವಲ್ಲ, ದೇಶಾದ್ಯಂತ ಅಸಂಖ್ಯ ಅಭಿಮಾನಿಗಳಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ನೆಚ್ಚಿನ ನಟ ಅಪ್ಪು ಇನ್ನಿಲ್ಲ ಎಂಬುದು ತಿಳಿಯುತ್ತಿದ್ದಂತೆ ಅಭಿಮಾನಿಗಳು, ಕನ್ನಡ ಚಿತ್ರರಂಗದವರ ಆಕ್ರಂದನ ಮುಗಿಲು ಮುಟ್ಟಿದೆ. ಸ್ವಯಂ ಪ್ರೇರಿತವಾಗಿ ರಾಜ್ಯಾದ್ಯಂತ ಹಲವೆಡೆ ಅಂಗಡಿ ಮುಗ್ಗಟ್ಟುಗಳನ್ನ ಮುಚ್ಚಲಾಗಿದೆ. ಜಿಮ್ಗಳೂ 2 ದಿನ ಬಂದ್ ಆಗಲಿವೆ. ಚಲನಚಿತ್ರ ಮಂದಿರಗಳ ಬಾಗಿಲನ್ನೂ ಮುಚ್ಚಲಾಗಿದೆ.
ಯಾವುದೇ ಅಹಿತಕರ ಘಟನೆಗೆ ಆಸ್ಪದ ಕೊಡಬೇಡಿ. ಪುನೀತ್ ಅವರನ್ನ ಅತ್ಯಂತ ಗೌರವಯುತವಾಗಿ, ಶಾಂತಿಯುತವಾಗಿ ಕಳುಹಿಸಿ ಕೊಡಲು ಸಹಕರಿಸಿ. ಅವರ ಅಗಲಿಕೆ ನೋವು ತೀವ್ರವಾಗಿ ಕಾಡುತ್ತಿದೆ. ಹಾಗಂತ ಅಭಿಮಾನಿಗಳು ತಾಳ್ಮೆ, ಸ್ಥಿಮಿತ ಕಳೆದುಕೊಳ್ಳಬಾರದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.
ವಿಷಾದಕರ ಪರಿಸ್ಥಿತಿಯಲ್ಲಿ ಪುನೀತ್ ರಾಜ್ಕುಮಾರ್: ಈ ಫೋಟೋ ನೋಡಿದ್ರೆ ಕಣ್ಣೀರು ಬರುತ್ತೆ