More

    ಪುನೀತ್​ ರಾಜ್​ಕುಮಾರ್​ ವಿಧಿವಶ: ಭಾನುವಾರದವರೆಗೂ ಬಾರ್​, ಪಬ್​ಗಳು ಬಂದ್​

    ಬೆಂಗಳೂರು: ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್​ ಅವರ ಅಗಲಿಕೆ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಬೆಂಗಳೂರಲ್ಲಿ ಭಾನುವಾರದವರೆಗೂ ಬಾರ್​ ಮತ್ತು ಪಬ್​ಗಳನ್ನ ಬಂದ್​ ಮಾಡುವಂತೆ ಆದೇಶ ಹೊರಡಿಸಲಾಗಿದೆ.

    ಸ್ಯಾಂಡಲ್​ವುಡ್​ನ ಪುನೀತ್​ ರಾಜ್​ಕುಮಾರ್​ ಅವರ ನಿಧನದ ಸುದ್ದಿಯನ್ನ ಕನ್ನಡಿಗರು ಮಾತ್ರವಲ್ಲ, ದೇಶಾದ್ಯಂತ ಅಸಂಖ್ಯ ಅಭಿಮಾನಿಗಳಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ನೆಚ್ಚಿನ ನಟ ಅಪ್ಪು ಇನ್ನಿಲ್ಲ ಎಂಬುದು ತಿಳಿಯುತ್ತಿದ್ದಂತೆ ಅಭಿಮಾನಿಗಳು, ಕನ್ನಡ ಚಿತ್ರರಂಗದವರ ಆಕ್ರಂದನ ಮುಗಿಲು ಮುಟ್ಟಿದೆ. ಸ್ವಯಂ ಪ್ರೇರಿತವಾಗಿ ರಾಜ್ಯಾದ್ಯಂತ ಹಲವೆಡೆ ಅಂಗಡಿ ಮುಗ್ಗಟ್ಟುಗಳನ್ನ ಮುಚ್ಚಲಾಗಿದೆ. ಜಿಮ್​ಗಳೂ 2 ದಿನ ಬಂದ್​ ಆಗಲಿವೆ. ಚಲನಚಿತ್ರ ಮಂದಿರಗಳ ಬಾಗಿಲನ್ನೂ ಮುಚ್ಚಲಾಗಿದೆ.

    ಪುನೀತ್​ ರಾಜ್​ಕುಮಾರ್​ ವಿಧಿವಶ: ಭಾನುವಾರದವರೆಗೂ ಬಾರ್​, ಪಬ್​ಗಳು ಬಂದ್​

    ಯಾವುದೇ ಅಹಿತಕರ ಘಟನೆಗೆ ಆಸ್ಪದ ಕೊಡಬೇಡಿ. ಪುನೀತ್​ ಅವರನ್ನ ಅತ್ಯಂತ ಗೌರವಯುತವಾಗಿ, ಶಾಂತಿಯುತವಾಗಿ ಕಳುಹಿಸಿ ಕೊಡಲು ಸಹಕರಿಸಿ. ಅವರ ಅಗಲಿಕೆ ನೋವು ತೀವ್ರವಾಗಿ ಕಾಡುತ್ತಿದೆ. ಹಾಗಂತ ಅಭಿಮಾನಿಗಳು ತಾಳ್ಮೆ, ಸ್ಥಿಮಿತ ಕಳೆದುಕೊಳ್ಳಬಾರದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

    ಪುನೀತ್​ ರಾಜ್​ಕುಮಾರ್​ ವಿಧಿವಶ: ಭಾನುವಾರದವರೆಗೂ ಬಾರ್​, ಪಬ್​ಗಳು ಬಂದ್​

    ವಿಷಾದಕರ ಪರಿಸ್ಥಿತಿಯಲ್ಲಿ ಪುನೀತ್​ ರಾಜ್​ಕುಮಾರ್​: ಈ ಫೋಟೋ ನೋಡಿದ್ರೆ ಕಣ್ಣೀರು ಬರುತ್ತೆ

    PHOTOS| ದೊಡ್ಮನೆ ಹುಡುಗನ ಅಪರೂಪದ ಫೋಟೋಗಳು ಇಲ್ಲಿವೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts