ಬೆಂಗಳೂರು: ಚಂದನವನದ ‘ರಾಜಕುಮಾರ’ ಪುನೀತ್ ರಾಜ್ಕುಮಾರ್ ಅವರ ಅಂತಿಮ ದರ್ಶನ ಪಡೆದ ಜೂ. ಎನ್ಟಿಆರ್ ಅವರು ಶಿವರಾಜ್ಕುಮಾರ್ ಅವನ್ನ ತಬ್ಬಿಕೊಂಡು ಸಂತಾಪ ಸೂಚಿಸಿದರು.
ತಮ್ಮನಂತಿದ್ದ ಪುನೀತ್ ರಾಜ್ಕುಮಾರ್ ಅವರ ಅಗಲಿಕೆ ತೀವ್ರ ದುಃಖ ತಂದಿದೆ ಎಂದು ನಂದಮೂರಿ ಬಾಲಕೃಷ್ಣ ಭಾವುಕರಾದರು. ನಮ್ಮ ತಂದೆಯ ಕಾಲದಿಂದಲೂ ರಾಜ್ಕುಮಾರ್ ಕುಟುಂಬದೊಂದಿಗೆ ಉತ್ತಮ ಸಂಬಂಧವಿದೆ. ಪ್ರತಿವರ್ಷ ಲೇಪಾಕ್ಷಿ ಉತ್ಸವ ನಡೆದಾಗಲೆಲ್ಲ ಅಪ್ಪುವನ್ನು ಕರೆಯುತ್ತಿದ್ದೆ. ಅವರು ಖುಷಿಯಿಂದಲೇ ಬರುತ್ತಿದ್ದರು. ಪುನೀತ್ ಇನ್ನಿಲ್ಲ ಎಂಬ ಕಹಿ ಸತ್ಯವನ್ನ ಈಗಲೂ ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ. ದೇವರು ಇಷ್ಟು ಬೇಗ ಅವರನ್ನು ಕರೆಸಿಕೊಂಡದ್ದು ನಿಜಕ್ಕೂ ನಂಬಲು ಆಗುತ್ತಿಲ್ಲ. ಪುನೀತ್ ಅಗಲಿಕೆ ಇಡೀ ಭಾರತ ಚಿತ್ರರಂಗಕ್ಕೆ ತುಂಬಲಾರದ ನಷ್ಟ. ಅವರ ಆತ್ಮಕ್ಕೆ ದೇವರು ಶಾಂತಿ ಕರುಣಿಸಲಿ ಎಂದು ಕಣ್ಣೀರಿಟ್ಟರು.
ಸಾವಿಗೂ ಮುನ್ನಾ ಪುನೀತ್ ಕರೆ ಮಾಡಿದ್ದು ಯಾರಿಗೆ? ಅದೆಲ್ಲವೂ ಕೊನೆಯಾಗಿಯೇ ಉಳಿಯಿತಲ್ಲ…
ಇದೆಂಥಾ ದುರ್ವಿಧಿ: ಅಪ್ಪು ವ್ಯಕ್ತಿತ್ವ ಸಾರುವ ಈ ಹಾಡಿನ ಸಾಲು ಅವರ ಅಕಾಲಿಕ ಮರಣವನ್ನೂ ನಿಜವಾಗಿಸಿ ಬಿಡ್ತು