ವಿಜಯನಗರ: ಭಾರೀ ಮಳೆಗೆ ಹಳ್ಳದಲ್ಲಿ ಬೈಕ್ ಸಮೇತ ದಂಪತಿ ಕೊಚ್ವಿ ಹೋಗಿ ದುರಂತ ಅಂತ್ಯ ಕಂಡ ಘಟನೆ ಹೂವಿನಹಡಗಲಿ ತಾಲೂಕಿನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.
ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ-ಮುತ್ಕೂರು ಗ್ರಾಮದ ನಿವಾಸಿಗಳಾದ ಮಲ್ಲಿಕಾರ್ಜುನ (55) ಮತ್ತು ನಿರ್ಮಲಾ ಮೃತರು.
ಇವರಿಬ್ಬರೂ ಬೈಕ್ನಲ್ಲಿ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ತಳಕಲ್ಗೆ ಹೋಗಿ ಮಂಗಳವಾರ ಸಂಜೆ ವಾಪಸ್ ಬರುತ್ತಿದ್ದರು. ಮಾರ್ಗಮಧ್ಯೆ ಹೂವಿನಹಡಗಲಿ ತಾಲೂಕಿನ ಪೂರ್ವ ಮತ್ತು ಪಶ್ಚಿಮ ಕಾಲ್ವಿ ಗ್ರಾಮಗಳ ಮದ ಇರೋ ಹಳ್ಳದ ಬಳಿ ಮಳೆ ನೀರಲ್ಲಿ ಕೊಚ್ಚಿಹೋಗಿದ್ದರು. ಬುಧವಾರ ಬೆಳಗ್ಗೆ ದಂಪತಿ ಶವಗಳು ಪತ್ತೆಯಾಗಿವೆ. ಸಾವಲ್ಲೂ ದಂಪತಿ ಒಂದಾದ ಸುದ್ದಿ ಕೇಳಿ ಕುಟುಂಬಸ್ಥರ ಆಕ್ರಂದ ಮುಗಿಲು ಮುಟ್ಟಿತ್ತು.
ಕೇಂದ್ರ ಮಾಜಿ ಸಚಿವ ಪಿ.ರಂಗರಾಜನ್ರ ಪತ್ನಿ ಕೊಲೆ! ಮನೆ ಕೆಲಸದವರಿಂದಲೇ ತಡರಾತ್ರಿ ಕೃತ್ಯ
ಕೈದಿಗಳ ಜತೆ ಜೈಲಿನಲ್ಲೇ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಮಹಿಳಾ ಪೊಲೀಸ್ ಅಧಿಕಾರಿ! ಮುಂದೇನಾಯ್ತು?