More

    ಕಲಾತ್ಮಕ ಸಹಿಯ ಶಾಂತಯ್ಯ ಇನ್ನಿಲ್ಲ: ಸಾವಲ್ಲೂ ಸಾರ್ಥಕತೆ ಮೆರೆದ ನಿವೃತ್ತ ಉಪನೋಂದಣಾಧಿಕಾರಿ

    ದಾಬಸ್​ಪೇಟೆ(ನೆಲಮಂಗಲ): ಕಲಾತ್ಮಕವಾಗಿ ಸಹಿ ಹಾಕುವ ಮೂಲಕ ಪ್ರಸಿದ್ಧಿ ಪಡೆದಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಕಂಬಾಳು ಗ್ರಾಮದ ನಿವಾಸಿ, ನಿವೃತ್ತ ಉಪನೋಂದಣಾಧಿಕಾರಿ ಶಾಂತಯ್ಯ (61) ಅವರು ಸಾವಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಕಣ್ಣುಗಳನ್ನು ದಾನ ಮಾಡಿ ಹಲವರ ಬದುಕಿಗೆ ಬೆಳಕು ನೀಡಿದ್ದಾರೆ.

    ಉತ್ತರಕನ್ನಡದ ಹೊನ್ನಾವರದಲ್ಲಿ ಉಪನೋಂದಣಾಧಿಕಾರಿ ಆಗಿದ್ದ ಶಾಂತಯ್ಯ, ವರ್ಷದ ಹಿಂದೆ ನಿವೃತ್ತರಾಗಿದ್ದರು. ಯಾರೂ ನಕಲು ಮಾಡಲಾಗದಂತೆ ಹಾಗೂ ಕಲಾತ್ಮಕವಾಗಿ ಸಹಿ ಹಾಕುತ್ತಿದ್ದ ಅವರು ಸಹಿ ಮಾಡಲು ಒಂದು ನಿಮಿಷ ಸಮಯ ತೆಗೆದುಕೊಳ್ಳುತ್ತಿದ್ದರು. ಅವರ ಸಹಿಯ ಶೈಲಿಯನ್ನು ಮೆಚ್ಚಿದ ಹೈಕೋರ್ಟ್​ ನ್ಯಾಯಾಧೀಶರೊಬ್ಬರು ಅವರನ್ನು ಗೌರವಿಸಿದ್ದರು.

    ಕಲಾತ್ಮಕ ಸಹಿಯ ಶಾಂತಯ್ಯ ಇನ್ನಿಲ್ಲ: ಸಾವಲ್ಲೂ ಸಾರ್ಥಕತೆ ಮೆರೆದ ನಿವೃತ್ತ ಉಪನೋಂದಣಾಧಿಕಾರಿ
    ಶಾಂತಯ್ಯ ಅವರ ಸಹಿ

    ಅನಾರೋಗ್ಯದಿಂದ ತುಮಕೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಶಾಂತಯ್ಯ ನಿಧನರಾದರು. ಸ್ವಗ್ರಾಮದಲ್ಲಿ ಗುರುವಾರ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿತು. ಕಣ್ಣುಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಶಾಂತಯ್ಯ ಸಾರ್ಥಕತೆ ಮೆರೆದಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರಿದ್ದಾರೆ.

    ಸಾಗರ ಎಸಿಗೆ 10 ಸಾವಿರ ರೂ. ದಂಡ ವಿಧಿಸಿದ ಹೈಕೋರ್ಟ್​! ದಂಡದ ಮೊತ್ತವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಪಾವತಿಸಲು ಸೂಚನೆ

    ಯುವತಿ ಜತೆ ಮೈಸೂರಿನ ಲಾಡ್ಜ್​ನಲ್ಲಿ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬಿಜೆಪಿ ಮುಖಂಡ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts