ಮೈಸೂರು: ನಿಮ್ಮ ಒಣ ಪ್ರತಿಷ್ಠೆಗೆ ಜನರನ್ನು ಏಕೆ ಸಾಯಿಸ್ತೀರಿ? ಜಿಲ್ಲಾಧಿಕಾರಿ ಆದ ಮಾತ್ರಕ್ಕೆ ನಿಮಗೇನು ಕೋಡು ಇರಲ್ಲ. ಜನರ ಸೇವೆ ಮಾಡಲು ಬಂದಿದ್ದೀರಿ? ಜನಪ್ರತಿನಿಧಿಗಳ ಬಳಿ ಹೇಳಿಸಿಕೊಳ್ಳದಂತೆ ಕೆಲಸ ಮಾಡಿಕೊಂಡು ಹೋಗಿ… ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಜನಪ್ರತಿನಿಧಿಗಳು ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡಿದ್ದಾರೆ.
ಶನಿವಾರ ನಡೆದ ಕ್ಲೋಸ್ ಡೋರ್ ಮೀಟಿಂಗ್ನಲ್ಲಿ ಶಾಸಕರಾದ ಸಾ.ರಾ.ಮಹೇಶ್, ಡಾ.ಯತೀಂದ್ರ ಸಿದ್ದರಾಮಯ್ಯ, ಎಚ್.ಪಿ.ಮಂಜುನಾಥ್, ಸಂಸದ ಪ್ರತಾಪ್ ಸಿಂಹ ಅವರು ರೋಹಿಣಿ ಸಿಂಧೂರಿ ವಿರುದ್ಧ ಯದ್ವಾತದ್ವಾ ವಾಗ್ದಾಳಿ ನಡೆಸಿದರು. ಇದನ್ನೂ ಓದಿರಿ ಕರೊನಾಗೆ ಒಂದೇ ದಿನ ತಾಯಿ-ಮಗ ಬಲಿ! ಒಂದೇ ಚಿತೆಯಲ್ಲಿ ಇಬ್ಬರ ಅಂತ್ಯಸಂಸ್ಕಾರ
ದಿನಪೂರ್ತಿ ಮೀಟಿಂಗ್ ಮಾಡಿದ್ರೆ ಕೆಲಸ ಆಗಲ್ಲ. ಜನರ ಕಷ್ಟ ಏನು ಅಂತ ಹಳ್ಳಿಗಳಿಗೆ ಹೋಗಿ ನೋಡಿ ಎಂದು ಶಾಸಕರು ನಿರಂತರವಾಗಿ ವಾಗ್ದಾಳಿ ನಡೆಸಿದರು. ಶಾಸಕರ ಆಪಾದನೆಗಳಿಗೆ ವಿವರಣೆ ನೀಡುವಂತೆ ಪ್ರತಾಪ್ ಸಿಂಹ ಪಟ್ಟು ಹಿಡಿದರು. ತಿ.ನರಸೀಪುರ ಸೇರಿದಂತೆ ತಾಲೂಕು ಕೇಂದ್ರಗಳಿಗೆ ಹೋಗಿ ಬಂದಿದ್ದೇನೆ ಎಂದಷ್ಟೇ ರೋಹಿಣಿ ಸಿಂಧೂರಿ ಹೇಳಿದರು. ಇದನ್ನೂ ಓದಿರಿ ಅತ್ತ ಪ್ರಿಯಕರನೊಂದಿಗೆ ಓಡಿ ಹೋದ ಮಗಳು, ಇತ್ತ ತೋಟದ ಮನೆಯಲ್ಲಿ ನಡೆಯಿತು ಘನಘೋರ ದುರಂತ!
ಇಡೀ ಸಭೆಯಲ್ಲಿ ಜಿಲ್ಲಾಧಿಕಾರಿ ಪರ ಮಾತನಾಡಿದು ಶಾಸಕ ಜಿ.ಟಿ.ದೇವೇಗೌಡ ಮಾತ್ರ. ಏನೂ ಮಾತನಾಡದೆ ಮೌನವಾಗಿದ್ದ ರೋಹಿಣಿ ಸಿಂಧೂರಿ, ಸಭೆ ಮುಗಿದ ಬಳಿಕ ಮಾಧ್ಯಮ ಪ್ರತಿನಿಧಿಗಳಿಗೂ ಪ್ರತಿಕ್ರಿಯೆ ನೀಡದೆ ನಿರ್ಗಮಿಸಿದರು.
ಅತ್ತ ಪ್ರಿಯಕರನೊಂದಿಗೆ ಓಡಿ ಹೋದ ಮಗಳು, ಇತ್ತ ತೋಟದ ಮನೆಯಲ್ಲಿ ನಡೆಯಿತು ಘನಘೋರ ದುರಂತ!
ಪ್ರೀತಿಸಿದ್ದಕ್ಕೆ ದಲಿತ ಯುವಕನಿಗೆ ಚಪ್ಪಲಿ ಹಾರ ಹಾಕಿ ತಲೆ ಬೋಳಿಸಿ ಮೆರವಣಿಗೆ! ಈ ವಿಡಿಯೋ ನೋಡಿದ್ರೆ ರಕ್ತ ಕುದಿಯತ್ತೆ
ನೀನು ಪವರ್ಫುಲ್ ಸಂಸದ, ತಾಕತ್ತಿದ್ರೆ ರೋಹಿಣಿ ಸಿಂಧೂರಿಯನ್ನ ವರ್ಗಾವಣೆ ಮಾಡಿಸು…
ಹೆರಿಗೆ ವೇಳೆ ದಾದಿಯ ಕೈಜಾರಿ ಬಿದ್ದು ನವಜಾತ ಶಿಶು ಸಾವು? ಆಸ್ಪತ್ರೆ ಬಳಿ ಮುಗಿಲುಮುಟ್ಟಿದ ಪಾಲಕರ ಆಕ್ರಂದನ
ಕರೊನಾಗೆ ಒಂದೇ ದಿನ ತಾಯಿ-ಮಗ ಬಲಿ! ಒಂದೇ ಚಿತೆಯಲ್ಲಿ ಇಬ್ಬರ ಅಂತ್ಯಸಂಸ್ಕಾರ
ಮಗನ ಸಾವಿನ ಸುದ್ದಿ ಕೇಳಿ ಸ್ಥಳದಲ್ಲೇ ಪ್ರಾಣಬಿಟ್ಟ ತಂದೆ-ತಾಯಿ! 2 ದಿನ ಸತ್ಯ ಬಚ್ಚಿಟ್ಟರೂ ಬದುಕಲಿಲ್ಲ ಹೆತ್ತವರು