ಮೈಸೂರು: ಒಂದಲ್ಲ ಒಂದು ಕಾರಣಕ್ಕೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಇಷ್ಟು ದಿನ ಕಿಡಿಕಾರಿದ್ದ ಶಾಸಕ ಸಾ.ರಾ.ಮಹೇಶ್, ಇದೀಗ ಮತ್ತೊಬ್ಬ ಅಧಿಕಾರಿ ಮನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದಿದ್ದಾರೆ. ರೋಹಿಣಿ ಮತ್ತು ಸಾ.ರಾ. ಮಹೇಶ್ ನಡುವಿನ ಜಟಾಪಟಿ ಕೆಲ ತಿಂಗಲ ಹಿಂದೆ ರಾಜ್ಯಾದ್ಯಂತ ಭಾರೀ ಸುದ್ದಿಯಾಗಿತ್ತು. ಸಿಂಧೂರಿ ಮೈಸೂರಿಂದ ಬೇರೆಡೆಗೆ ವರ್ಗಾವಣೆ ಆದರೂ ಸಾ.ರಾ. ಮಹೇಶ್ ಕೋಪ ಮಾತ್ರ ಕಡಿಮೆ ಆಗಿಯೇ ಇಲ್ಲ. ಬಟ್ಟೆ ಬ್ಯಾಗ್ ಖರೀದಿಯಲ್ಲಿ ಕೋಟ್ಯಂತರ ರೂಪಾಯಿ ಅಕ್ರಮವೆಸಗಿದ್ದಾರೆ ಎಂದು ಸಿಂಧೂರಿ ವಿರುದ್ಧ ನಿನ್ನೆಯಷ್ಟೇ ಗಂಭೀರ ಆರೋಪ ಮಾಡಿದ್ದ ಮಹೇಶ್, ಇಂದು ಮನೀಶ್ ಮೌದ್ಗಿಲ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಕೆ.ಆರ್.ನಗರದಲ್ಲಿ ಸುದ್ದಿಗಾರರೊಂದಿಗೆ ಸಾ.ರಾ.ಮಹೇಶ್ ಮಾತನಾಡುತ್ತಾ, ಮೈಸೂರು ಭೂ ಅಕ್ರಮ ಪ್ರಕರಣದ ಮರು ತನಿಖಾ ಆದೇಶಕ್ಕೆ ಕೆಂಡಾಮಂಡಲರಾದರು. ‘ನೀನು ಸರ್ವೇ ಕಮಿಷನರ್ ಆದ ತಕ್ಷಣ ರಾಜ್ಯಕ್ಕೆ ಸುಪ್ರೀಮಾ? ತನಿಖೆ ಆದೇಶಕ್ಕೂ ಮುನ್ನ ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆಯಬೇಕಿತ್ತು ಎಂದರು. ರೋಹಿಣಿ ಸಿಂಧೂರಿ ಮತ್ತು ಮನೀಶ್ ಮೌದ್ಗಿಲ್ ಇಬ್ಬರೂ ತುಂಬಾ ತುಂಬಾ ಹತ್ತಿರ’ ಎಂದು ಲೇವಡಿ ಮಾಡಿದರು.
‘ನಾನು ಯಾವುದೇ ಭೂ ಒತ್ತುವರಿ ಮಾಡಿಲ್ಲ. ಈ ಹಿಂದೆ ತನಿಖೆ ಮಾಡಿ ಒತ್ತುವರಿ ಆಗಿಲ್ಲ ಅಂತ ಅಧಿಕಾರಿಗಳು ಹೇಳಿದ್ದಾರೆ. ನಾನೀಗ ಭೂಮಿನ ಟ್ರ್ಯಾಲಿ ತೆಗೆದುಕೊಂಡು ಎಳೆದುಬಿಟ್ಟಿದ್ದೀನಾ?’ ಎಂದು ತನಿಖಾ ಆದೇಶದ ವಿರುದ್ಧ ಶಾಸಕ ಸಾ.ರಾ.ಮಹೇಶ್ ಕಿಡಿಕಾರಿದರು.
ಮೈಸೂರಲ್ಲಿ ಗ್ಯಾಂಗ್ ರೇಪ್: ಆರೋಪಿಗಳಲ್ಲೊಬ್ಬ ಭಗ್ನಪ್ರೇಮಿ! ಲವ್ ಫೇಲ್ಯೂರ್ಗೆ ಲೈಂಗಿಕ ಚಟ ಅಂಟಿಸಿಕೊಂಡಿದ್ದ…
ಮಗಳ ಪ್ರಿಯಕರನ ಕೊಂದು ಜೈಲು ಸೇರಿದ ಅಪ್ಪ-ಅಮ್ಮ! ಎಲ್ಲವನ್ನೂ ಕಳೆದುಕೊಂಡಾಕೆ ಕೊನೆಗೂ ಬದುಕಲಿಲ್ಲ
ಬೆಂಗಳೂರಿನ ಮಹಿಳಾ ಟೆಕ್ಕಿ ಮೇಲೆ ಅತ್ಯಾಚಾರ: ಮೂವರೂ ಮದ್ಯ ಕುಡಿದೆವು, ಪ್ರಜ್ಞೆ ಬಂದಾಗ ಆತ ಬೆತ್ತಲಾಗಿದ್ದ…