ಶಿವಮೊಗ್ಗ: ಕುಖ್ಯಾತ ರೌಡಿಶೀಟರ್ ಹೆಬ್ಬೆಟ್ ಮಂಜನ ಹೆಸರಲ್ಲಿ ಶಿವಮೊಗ್ಗದ ಉದ್ಯಮಿಯೊಬ್ಬರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಮಹಿಳೆಯೊಬ್ಬರನ್ನು ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಭಟ್ಕಳದ ಸಾಹಿರಾ ಬಾನು ಬಂಧಿತ ಮಹಿಳೆ. ಈಕೆ ಪರಪ್ಪನ ಅಗ್ರಹಾರದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಸದ್ದಾಂ ಎಂಬಾತನ ಪತ್ನಿ.
ಇತ್ತೀಚೆಗೆ ಸದ್ದಾಂ ಜೈಲಿನಿಂದಲೇ ನಗರದ ಉದ್ಯಮಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದ. ತಾನು ಹೆಬ್ಬೆಟ್ ಮಂಜನ ಕಡೆಯವನು ಎಂದು ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ. ಇದರಿಂದ ಆತಂಕಗೊಂಡ ಉದ್ಯಮಿ ಒಮ್ಮೆ ಸದ್ದಾಂ ಪತ್ನಿ ಸಾಹಿರಾ ಬಾನು ಬ್ಯಾಂಕ್ ಖಾತೆಗೆ 50 ಸಾವಿರ ರೂ. ಹಾಕಿದ್ದ. ಮತ್ತೆ ಮತ್ತೆ ಹಣಕ್ಕೆ ಬೇಡಿಕೆ ಇಟ್ಟಾಗ ಉದ್ಯಮಿ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ತನಿಖೆ ಕೈಗೊಂಡಿದ್ದ ಇನ್ಸ್ಪೆಕ್ಟರ್ ಕೆ.ಟಿ.ಗುರುರಾಜ್ ನೇತೃತ್ವದ ತಂಡ ಮಹಿಳೆಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಇಂಟರ್ನ್ಶಿಪ್ ವಿದ್ಯಾರ್ಥಿನಿಗೆ ಹಿರಿಯ ವಕೀಲನಿಂದ ಲೈಂಗಿಕ ಕಿರುಕುಳ: ಪ್ರಕರಣ ತಿರುಚಲು ಹೋಗಿ ಸಿಕ್ಕಿಬಿದ್ದ ಮಹಿಳೆ
ನಿನ್ನೆ ತಡರಾತ್ರಿ ಮಗನಿಂದಲೇ ನಡೆಯಿತು ಘೋರ ದುರಂತ: ಪ್ರೇಯಸಿ ಜತೆಗಿದ್ದ ತಂದೆ ಸೇರಿ ಇಬ್ಬರ ಹತ್ಯೆ