ಶಿವಮೊಗ್ಗ: ಮೂರು ದಿನದ ಹಿಂದೆ ನಾಪತ್ತೆಯಾಗಿದ್ದ ಬಸ್ ಮಾಲೀಕ ಪ್ರಕಾಶ್ (54) ಶವವಾಗಿ ಪತ್ತೆಯಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಪ್ರಕಾಶ್ ಟ್ರಾವೆಲ್ಸ್ ಮಾಲೀಕರಾಗಿದ್ದ ಪ್ರಕಾಶ್, ಜ.21ರ ಸಂಜೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಸಾಗರ ನಗರ ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರು ಮಿಸ್ಸಿಂಗ್ ಕೇಸ್ ದಾಖಲಿಸಿದ್ದರು. ಶನಿವಾರ ಸಂಜೆ ಪ್ರಕಾಶ್ ಅವರ ಕಾರು, ಮೊಬೈಲ್ ಫೋನ್ ಹೊಸನಗರ ತಾಲೂಕಿನ ಪಟಗುಪ್ಪೆ ಸೇತುವೆ ಮೇಲೆ ಪತ್ತೆಯಾಗಿತ್ತು. ಕಾರಿನಿಂದ ಸ್ವಲ್ಪ ದೂರದಲ್ಲಿ ಸೇತುವೆ ಮೇಲೆ ಚಪ್ಪಲಿ ಕೂಡ ಸಿಕ್ಕಿತ್ತು.
ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಪ್ರಕಾಶ್ಗಾಗಿ ನಿರಂತರ ಶೋಧ ಕಾರ್ಯ ನಡೆಸುತ್ತಿದ್ದರು. ಸೋಮವಾರ ಬೆಳಗ್ಗೆ ಬಸ್ ಮಾಲೀಕ ಪ್ರಕಾಶ್ ಶವ ಪತ್ತೆಯಾಗಿದೆ. ಪ್ರಕಾಶ್ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ಶಿವಮೊಗ್ಗದ ಸಾಗರ ಭಾಗದಲ್ಲಿ ಸುಮಾರು 20 ವರ್ಷದಿಂದ ಬಸ್ಗಳ ಸೇವೆ ಒದಗಿಸುತ್ತಿದೆ ಪ್ರಕಾಶ್ ಟ್ರಾವೆಲ್ಸ್. ಕರೊನಾ ಲಾಕ್ಡೌನ್ ಆದ ಬಳಿಕ ಪ್ರಕಾಶ್ ಟ್ರಾವೆಲ್ಸ್ ಸಂಸ್ಥೆಗೆ ದೊಡ್ಡ ಪ್ರಮಾಣದ ನಷ್ಟ ಸಂಭವಿಸಿತ್ತು ಎನ್ನಲಾಗಿದೆ. ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸ್ ತನಿಖೆ ಬಳಿಕ ಸತ್ಯಾಸತ್ಯತೆ ಹೊರಬರಲಿದೆ. ಮರಣೋತ್ತರ ಪರೀಕ್ಷೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ. (ದಿಗ್ವಿಜಯ ನ್ಯೂಸ್)
ಸಿದ್ಧಗಂಗಾ ಮಠದ ವಿದ್ಯಾರ್ಥಿ ಮೇಲೆ ಮಾರಣಾಂತಿಕ ಹಲ್ಲೆ: ಭಯದ ವಾತಾವರಣ ಸೃಷ್ಟಿ
10 ರೂ. ಕೊಡೋ ಯೋಗ್ಯತೆ ಇಲ್ಲ, ಕಾರ್ ತಗೋತೀಯಾ? ಎಂದ ಶೋ ರೂಂ ಸಿಬ್ಬಂದಿಗೆ 1 ತಾಸಲ್ಲೇ ಶಾಕ್ ಕೊಟ್ಟ ಯುವರೈತ!
ಪೂಜೆ ನೆಪದಲ್ಲಿ ಪುರೋಹಿತನನ್ನು ಮನೆಗೆ ಕರೆಸಿಕೊಂಡ ಈ ದಂಪತಿ ಅಸಹ್ಯ ಕೆಲಸ ಮಾಡಿಬಿಟ್ರು…