ಚನ್ನಪಟ್ಟಣ: ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ದೇವರಹೊಸಹಳ್ಳಿಯಲ್ಲಿ ಬಿಸಿ ಸಾಂಬಾರ್ ಮೈಮೇಲೆ ಬಿದ್ದು ಒಂದೂವರೆ ವರ್ಷದ ಮಗು ಮೃತಪಟ್ಟಿದೆ.
ದೇವರಹೊಸಹಳ್ಳಿಯ ಚೌಡೇಶ್ ಮತ್ತು ರಾಧಾ ದಂಪತಿ ಪುತ್ರ ಧನ್ವಿಕ್ ಮೃತ ಮಗು. ಸೋಮವಾರ ರಾತ್ರಿ ಮನೆಯಲ್ಲಿ ಮಗು ಗ್ಯಾಸ್ ಸ್ಟೌವ್ನ ಪೈಪ್ ಹಿಡಿದು ಆಟವಾಡುವಾಗ ಸ್ಟೌವ್ ಮೇಲಿದ್ದ ಸಾಂಬರ್ ಪಾತ್ರೆ ಮೈಮೇಲೆ ಬಿದ್ದಿದೆ.
ಬಿಸಿ ಸಾಂಬರ್ ಮೈಮೇಲೆ ಬಿದ್ದು, ತೀವ್ರವಾಗಿ ಗಾಯಗೊಂಡಿದ್ದ ಮಗುವನ್ನು ಮಂಡ್ಯದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಗು ಹುಟ್ಟಿದ ಮೂರೇ ದಿನಕ್ಕೆ ರೈಲಿಗೆ ತಲೆ ಕೊಟ್ಟ ಗಂಡ! ಪತ್ನಿಯ ಆ ನಿರ್ಧಾರವೇ ಇಷ್ಟಕ್ಕೆಲ್ಲ ಕಾರಣ
ತಡರಾತ್ರಿ ಗ್ರಾಪಂ ಕಾರ್ಯದರ್ಶಿ ಆತ್ಮಹತ್ಯೆ! ಅದೇ ಮನೆಯಲ್ಲಿ ಅಪ್ಪ-ಅಕ್ಕನೂ ನೇಣಿಗೆ ಶರಣಾಗಿದ್ದರು…
ವರದಕ್ಷಿಣೆಗೆ ವೈದ್ಯೆ ಬಲಿ! ಸಾವಿಗೂ ಮುನ್ನ ಸೋದರನ ಬಳಿ ಆಕೆ ಬಿಚ್ಚಿಟ್ಟ ನೋವಿನ ಸಂದೇಶ ಇಲ್ಲಿದೆ
ಗಂಡನಿದ್ದರೂ ಪರಪುರುಷನ ಜತೆ ಮಹಿಳೆಯ ಕಾಮದಾಟ! ಬೇಡ ಬೇಡ ಎಂದವನ ಉಸಿರನ್ನೇ ನಿಲ್ಲಿಸಿದ್ಳು