ಬೆಳಗಾವಿ: ಸಾಲವಾಗಿ ಕೊಟ್ಟ ಹಣವನ್ನು ವಾಪಸ್ ಕೊಡಿ ಎಂದ ಮಹಿಳೆಯನ್ನು ಗುಂಡಿಕ್ಕಿ ಕೊಂದ ಆರೋಪಿ, ಪುರಸಭೆ ಸದಸ್ಯ ಉಮೇಶ ಕಾಂಬಳೆ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಬಡ್ಡಿ ವ್ಯವಹಾರ ನಡೆಸುತ್ತಿದ್ದ ಶೈಲಾ ಸುಬೇದಾರ್ ಬಡ್ಡಿ ವ್ಯವಹಾರ ಮಾಡಿಕೊಂಡು ಸಂಕೇಶ್ವರದಲ್ಲಿ ನೆಲೆಸಿದ್ದಳು. ಜ.16ರಂದು ಮನೆಗೆ ನುಗ್ಗಿದ್ದ ದುಷ್ಕರ್ಮಿಗಳು ಈಕೆಯನ್ನು ಗುಂಡಿಕ್ಕಿ ಕೊಂದು ಪರಾರಿಯಾಗಿದ್ದರು. ಮಿಂಚಿನ ಕಾರ್ಯಾಚರಣೆ ನಡೆಸಿದ ಸಂಕೇಶ್ವರ ಠಾಣೆ ಪೊಲೀಸರು ಸಂಕೇಶ್ವರದ 14ನೇ ಸದಸ್ಯ ಉಮೇಶ ಕಾಂಬಳೆ ಎಂಬಾತನನ್ನು ಬಂಧಿಸಿದ್ದಾರೆ.
ಶೈಲಾ ಸುಬೇದಾರ್ ಬಳಿ ಉಮೇಶ ಕಾಂಬಳೆ 25 ಲಕ್ಷ ರೂ. ಪಡೆದಿದ್ದ. ಬಡ್ಡಿ ಸಮೇತ ಹಣ ವಾಪಸ್ ಕೊಡುವಂತೆ ಉಮೇಶಗೆ ಶೈಲಾ ಕೇಳಿದ್ದರಂತೆ. ಇದಕ್ಕೆ ಸಿಟ್ಟಾದ ಉಮೇಶ ತನ್ನ ಸಹಚರರಿಬ್ಬರ ಜತೆ ಸೇರಿ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಮತ್ತಿಬ್ಬರು ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ದೂರು ನೀಡಲು ಬಂದಾಕೆಯನ್ನೇ ಮಂಚಕ್ಕೆ ಕರೆದ ಪೊಲೀಸ್ ಇನ್ಸ್ಪೆಕ್ಟರ್! ಸಂತ್ರಸ್ತೆ ಬಿಚ್ಚಿಟ್ಟ ನೋವು ಇಲ್ಲಿದೆ