ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಅನ್ಲಾಕ್ ಶುರುವಾಗುತ್ತಿದ್ದಂತೆ ನಂದಿಬೆಟ್ಟಕ್ಕೆ ಸಾವುರಾರು ಸಂಖ್ಯೆಯಲ್ಲಿ ಪ್ರವಾಸಿಗರು ಕರೊನಾ ಸೋಂಕನ್ನು ಲೆಕ್ಕಿಸದೆ ಲಗ್ಗೆ ಇಟ್ಟಿದ್ದರು. ಕಳೆದ ಶನಿವಾರ ಮತ್ತು ಭಾನುವಾರ ನಂದಿ ಗಿರಿಧಾಮ ಪ್ರವಾಸಿಗರಿಂದ ತುಂಬಿ ತುಳುಕುತ್ತಿತ್ತು. ಸೂರ್ಯೋದಯಕ್ಕೂ ಮುನ್ನವೇ ನೂರಾರು ಬೈಕ್ ಮತ್ತು ಕಾರಿನಲ್ಲಿ ನಂದಿ ಹಿಲ್ಸ್ಗೆ ನಾ ಮುಂದು, ತಾ ಮುಂದು ಎಂಬಂತೆ ಬಂದಿದ್ದರು, ಮುಂದಿನ ವೀಕೆಂಡ್ಗೂ ಹೋಗಬೇಕೆಂದು ಲೆಕ್ಕವಿಲ್ಲದಷ್ಟು ಮಂದಿ ಪ್ಲಾನ್ ಮಾಡಿಕೊಂಡಿದ್ದಾರೆ. ಆದರೆ ಇದೀಗ ವಿಕೇಂಡ್ ಪ್ರವಾಸಕ್ಕೆ ಬ್ರೇಕ್ ಹಾಕಿದೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ.
ಕರೊನಾ ಸೋಂಕಿನ ಭೀತಿಯನ್ನೂ ಮರೆತು ಸಾವಿರಾರು ಮಂದಿ ಒಮ್ಮೆಲೆ ನಂದಿ ಬೆಟ್ಟಕ್ಕೆ ಭೇಟಿ ಕೊಟ್ಟದ್ದು, ಸಾಮಾಜಿಕ ಅಂತರ, ಮಾಸ್ಕ್ ಧರಿಸುವಿಕೆ ನಿಯಮವನ್ನು ಹಲವರು ಪಾಲಿಸದಿರುವುದು ಕರೊನಾ ಸೋಂಕು ಹೆಚ್ಚಳದ ಭೀತಿಯನ್ನು ಮೂಡಿಸಿದೆ, ಹಾಗಾಗಿ ಇದಕ್ಕೆ ಬ್ರೇಕ್ ಹಾಕಲು ಅಪರ ಜಿಲ್ಲಾಧಿಕಾರಿ ಎಚ್.ಅಮರೇಶ್ ಅವರು, ಶನಿವಾರ ಮತ್ತು ಭಾನುವಾರ ನಂದಿ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಮಾಡಿದೆ,
ಮುಂದಿನ ಆದೇಶದವರೆಗೂ ಪ್ರತಿ ಶುಕ್ರವಾರ ಸಂಜೆ 6 ರಿಂದ ಸೋಮವಾರ ಬೆಳಗ್ಗೆ 6ರ ವರೆಗೆ ನಂದಿ ಬೆಟ್ಟಕ್ಕೆ ಪ್ರವೇಶ ನಿಷೇಧ ಹೇರಲಾಗಿದೆ. ವೀಕೆಂಡ್ ಡೇ ಹೊರತುಪಡಿಸಿದಂತೆ ಉಳಿದ ದಿನಗಳಲ್ಲಿ ಪ್ರವಾಸಿಗರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ.
ಬೆಳ್ಳಂಬೆಳಗ್ಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರ ಲಗ್ಗೆ! ಮಾರ್ಗದಲ್ಲೇ ಬಿಸಿ ಮುಟ್ಟಿಸಿದ ಪೊಲೀಸರು
ಕೈದಿಗಳ ಜತೆ ಜೈಲಿನಲ್ಲೇ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಮಹಿಳಾ ಪೊಲೀಸ್ ಅಧಿಕಾರಿ! ಮುಂದೇನಾಯ್ತು?
ಕಿರುಕುಳ ಸಹಿಸಲಾಗದೆ ತವರಿಗೆ ಹೋಗಿದ್ದ ಪತ್ನಿಗೆ ಫೋನ್ನಲ್ಲೇ ಹಿಂಸಿಸುತ್ತಿದ್ದ ಭೂಪ! ನಡೆದೇ ಹೋಯ್ತು ದುರಂತ