ಬೆಂಗಳೂರು: ರಾಜ್ಯ ರಾಜ್ಯಧಾನಿ ಬೆಂಗಳೂರಲ್ಲಿ ಜ.29ರ ವರೆಗೂ ಶಾಲಾ-ಕಾಲೇಜು ಓಪನ್ ಆಗಲ್ಲ. ಜ.29ರಂದು ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತೆ ಎಂದು ಶಿಕ್ಷಣ ಸಚಿವ ನಾಗೇಶ್ ತಿಳಿಸಿದರು.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕರೊನಾ ಮಾರ್ಗಸೂಚಿ ಕುರಿತು ಶುಕ್ರವಾರ ನಡೆದ ಮಹತ್ವದ ಸಭೆ ಬಳಿಕ ಮಾತನಾಡಿದ ಸಚಿವರು, ಬೆಂಗಳೂರು ಹೊರತುಪಡಿಸಿ ಇತರೆಡೆ ಶಾಲೆ-ಕಾಲೇಜುಗಳು ಆರಂಭ ಆಗಲಿವೆ. ಬೆಂಗಳೂರಿನಲ್ಲಿ ಶಾಲೆ-ಕಾಲೇಜು ಓಪನ್ ಮಾಡುವ ಕುರಿತು ಜ.29ರ ಬಳಿಕ ನಿರ್ಧಾರ ಮಾಡಲಾಗುತ್ತೆ ಎಂದು ವಿವರಿಸಿದರು.
ಇನ್ಮುಂದೆ ಶಾಲೆಯನ್ನು ಒಂದು ಘಟಕವನ್ನಾಗಿ ಪರಿಗಣಿಸಿ ಸೋಂಕು ಪ್ರಕರಣಗಳ ಆಧಾರದಲ್ಲಿ ತಾಲೂಕು ಅಧಿಕಾರಿಗಳ ಜತೆ ಚರ್ಚಿಸಿ ಆಯಾ ಜಿಲ್ಲಾಧಿಕಾರಿಗಳು ರಜೆ ಘೋಷಣೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ನಾಗೇಶ್ ಹೇಳಿದರು.
ಇನ್ನು ನಾಳೆಯಿಂದಲೇ (ಜ.22) ವೀಕೆಂಡ್ ಕರ್ಫ್ಯೂ ರದ್ದಾಗಿದ್ದು, ಎಂದಿನಂತೆ ನೈಟ್ ಕರ್ಫ್ಯೂ ಮುಂದುವರಿಯಲಿದೆ. ಆಸ್ಪತ್ರೆಗೆ ಸೇರುವವರ ಪ್ರಮಾಣ ಶೇ.5ಕ್ಕಿಂತ ಹೆಚ್ಚಾದರೆ ಮತ್ತೆ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗುತ್ತೆ ಎಂದು ಅಶೋಕ್ ಎಚ್ಚರಿಸಿದರು. ರಾತ್ರಿ ಕರ್ಫ್ಯೂ ಸೇರಿದಂತೆ ಉಳಿದ ನಿರ್ಬಂಧಗಳು ಮುಂದುವರಿಕೆ ಆಗಲಿವೆ. ಧರಣಿ, ಪ್ರತಿಭಟನೆ, ರ್ಯಾಲಿ ನಡೆಸುವಂತಿಲ್ಲ. ಇದು ಇಡೀ ಕರ್ನಾಟಕಕ್ಕೆ ಅನ್ವಯ ಎಂದರು.
ರಾಜ್ಯಾದ್ಯಂತ ನಾಳೆಯಿಂದಲೇ ವೀಕೆಂಡ್ ಕರ್ಫ್ಯೂ ರದ್ದು! ನೈಟ್ ಕರ್ಫ್ಯೂ ಮುಂದುವರಿಕೆ
ಪೂಜೆ ನೆಪದಲ್ಲಿ ಪುರೋಹಿತನನ್ನು ಮನೆಗೆ ಕರೆಸಿಕೊಂಡ ಈ ದಂಪತಿ ಅಸಹ್ಯ ಕೆಲಸ ಮಾಡಿಬಿಟ್ರು…
ದೂರು ನೀಡಲು ಬಂದಾಕೆಯನ್ನೇ ಮಂಚಕ್ಕೆ ಕರೆದ ಪೊಲೀಸ್ ಇನ್ಸ್ಪೆಕ್ಟರ್! ಸಂತ್ರಸ್ತೆ ಬಿಚ್ಚಿಟ್ಟ ನೋವು ಇಲ್ಲಿದೆ