More

    ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ ನಿಧನ

    ಮಂಗಳೂರು: ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ ಇಂದು ಮುಂಜಾನೆ ನಿಧನರಾದರು. ಇತ್ತೀಚಿಗೆ ಅನಾರೋಗ್ಯಕ್ಕೀಡಾಗಿದ್ದ ಸುರೇಂದ್ರ ಶೆಟ್ಟಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಮಂಗಳವಾರ ಕೊನೆಯುಸಿರೆಳೆದರು. ಮೃತರಿಗೆ 57 ವರ್ಷ ವಯಸ್ಸಾಗಿತ್ತು.

    ಬ್ರಹ್ಮಾವರದ ಆವರ್ಸೆ ಪಡುಮನೆಯಲ್ಲಿ ಜನಿಸಿದ ಸುರೇಂದ್ರ ಶೆಟ್ಟಿ ಅಚ್ಲಾಡಿಯಲ್ಲಿ ಬೆಳೆದಿದ್ದರು. ಮಂಗಳೂರು ವಿಶ್ವವಿದ್ಯಾಲಯದ ಸಮೂಹ‌ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. ಮುಂಗಾರು, ಸಂಯುಕ್ತ ಕರ್ನಾಟಕ, ಕನ್ನಡಪ್ರಭ, ವಿಜಯಕರ್ನಾಟಕ, ವಾರ್ತಾ ಭಾರತಿ ಮತ್ತಿತರ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದರು. ನಂತರ ಕನ್ನಡಪ್ರಭ ಪತ್ರಿಕೆಯ ಮಂಗಳೂರು ಬ್ಯೂರೋ ಮುಖ್ಯಸ್ಥರಾಗಿದ್ದರು. ಇದನ್ನೂ ಓದಿರಿ ಕರೊನಾ ವ್ಯಾಕ್ಸಿನ್ ಪಡೆಯೋದ್ರಿಂದ ರಾಜ್ಯದಲ್ಲಿ ಹೆಚ್ಚಲಿದ್ಯಾ ‘ರಕ್ತಕ್ಷಾಮ’?

    ಮಂಗಳೂರು ವಿವಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಹಳೇ ವಿದ್ಯಾರ್ಥಿಗಳ ಸಂಘದ(MAAM) ಸ್ಥಾಪಕ ಗೌರವಾಧ್ಯಕ್ಷರಾಗಿದ್ದ ಸುರೇಂದ್ರ ಶೆಟ್ಟಿ, ಬೆಳ್ಳಿ ಹಬ್ಬ ಸಮಿತಿಯ ಅಧ್ಯಕ್ಷರಾಗಿದ್ದರು. ಮೃತರಿಗೆ ಪತ್ನಿ, ಪುತ್ರಿ ಇದ್ದಾರೆ.

    ಮಗನ ಸಾವಿನ ಸುದ್ದಿ ಕೇಳಿ ಸ್ಥಳದಲ್ಲೇ ಪ್ರಾಣಬಿಟ್ಟ ತಂದೆ-ತಾಯಿ! 2 ದಿನ ಸತ್ಯ ಬಚ್ಚಿಟ್ಟರೂ ಬದುಕಲಿಲ್ಲ ಹೆತ್ತವರು

    ನನ್ನ ಕಣ್ಮುಂದೆಯೇ ಹಲವರು ಪ್ರಾಣಬಿಟ್ಟರು, ನನಗೂ ಭಯವಾಗ್ತಿದೆ… ಎಂದು ಕರೆ ಮಾಡಿದ್ದ ನವವಿವಾಹಿತ 2 ತಾಸಲ್ಲೇ ಪ್ರಾಣಬಿಟ್ಟ

    ನಿನ್ನೆ ಹಸೆಮಣೆಗೇರಿದ್ದ ಮದುಮಗ ಇಂದು ಕರೊನಾಗೆ ಬಲಿ! ಮನಕಲಕುತ್ತೆ ಈ ಘಟನೆ

    ಶಿರಾಳಕೊಪ್ಪ ದರ್ಗಾದ ಗೋರಿ ಮೇಲಿನ ಬಟ್ಟೆಯಲ್ಲಿ ಉಸಿರಾಟದ ಅನುಭವ, ರಾತ್ರೋರಾತ್ರಿ ಸ್ಥಳಕ್ಕೆ ದೌಡಾಯಿಸಿದ ಜನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts