ವಿಜಯಪುರ: ಎಂಸಿ ಮನಗೂಳಿ ಅವರ ನಿಧನದಿಂದ ತೆರವಾಗಿರುವ ಸಿಂದಗಿ ವಿಧಾನಸಾಭೆ ಕ್ಷೇತ್ರದ ಶಾಸಕ ಸ್ಥಾನಕ್ಕೆ ಉಪಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಟಿಕಟ್ಗಾಗಿ ಮೂರು ಪಕ್ಷದಲ್ಲೂ ಪೈಪೋಟಿ ಶುರುವಾಗಿದೆ.
ಪ್ರಮುಖವಾಗಿ ಬಿಜೆಪಿಯಿಂದ ಮಾಜಿ ಶಾಸಕ ರಮೇಶ ಭೂಸನೂರ, ಕಾಂಗ್ರೆಸ್ನಿಂದ ಅಶೋಕ ಮನಗೂಳಿ ಹಾಗೂ ಜೆಡಿಎಸ್ನಿಂದ ಮಾಜಿ ಶಾಸಕ ರವಿಕಾಂತ ಪಾಟೀಲ್ ಅವರ ಹೆಸರುಗಳು ಕೇಳಿ ಬಂದಿವೆ. ಜೆಡಿಎಸ್ನಿಂದ ಚುನಾಯಿತರಾಗಿದ್ದ ಎಂಸಿ ಮನಗೂಳಿ ಅವರು 2021ರ ಜನವರಿ 28ರಂದು ಅನಾರೋಗ್ಯದಿಂದ ಮೃತಪಟ್ಟಿದ್ದರು. ಇದಾದ ಬಳಿಕ ಅವರ ಹಿರಿಯ ಪುತ್ರ ಅಶೋಕ ಮನಗೂಳಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಮೂರು ಪಕ್ಷಗಳಲ್ಲೂ ರಾಜಕೀಯ ಚಟುವಟಿಕೆ ಗರಿಗೆದರಿವೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ನಲ್ಲಿ ಟಿಕೆಟ್ ಆಕಾಕ್ಷಿಗಳ ಪಟ್ಟಿ ಬೆಳೆಯುತ್ತಲೇ ಇದೆ. ಇನ್ನು ಪಕ್ಷಗಳ ವರಿಷ್ಠರು ಅಂತಿಮವಾಗಿ ಯಾರಿಗೆ ಅಭ್ಯರ್ಥಿಯನ್ನಾಗಿ ಗುರುತಿಸುತ್ತಾರೋ ನೋಡಬೇಕಿದೆ. ಅಕ್ಟೋಬರ್ 30ರಂದು ಉಪ ಚುನಾವಣೆ ನಡೆಯಲಿದೆ. ನವೆಂಬರ್ 2 ರಂದು ಮತ ಎಣಿಕೆ ನಡೆಯಲಿದೆ.
ಗಂಡಂದಿರನ್ನ ಕಳ್ಕೊಂಡು ತವರಿಗೆ ಬಂದ ಮಗಳ ಕಣ್ಣಿಗೆ ಬಿತ್ತು ತಾಯಿ-ದೊಡ್ಡಪ್ಪನ ಲವ್ವಿಡವ್ವಿ… ಮುಂದಾಗಿದ್ದು ದುರಂತ
ಮನೆಯ ಟೆರೇಸ್, ರೂಮಿನಲ್ಲೇ 3 ಕೋಟಿ ಮೌಲ್ಯದ ಗಾಂಜಾ ಬೆಳೆದ! ಬಯಲಾಯ್ತು ಈಗಲ್ಟನ್ ರೆಸಾರ್ಟ್ನ ವಿಲ್ಲಾ ರಹಸ್ಯ