ಬೆಳ್ತಂಗಡಿ: ರಿಯಲ್ ಎಸ್ಟೇಟ್ ಹಾಗೂ ಫ್ಲೈವುಡ್ ವ್ಯವಹಾರ ನಡೆಸುತ್ತಿದ್ದ ಉದ್ಯಮಿಯನ್ನುಶಿರಸಿ ಬಳಿ ಅಪಘಾತ ಮಾಡಿ ಬಳಿಕ ತಲ್ವಾರ್ನಿಂದ ಒಡೆದು ಕೊಲೆ ಮಾಡಲಾಗಿದೆ.
ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ತೋಟತ್ತಾಡಿ ಸನಿಹದ ಬೆಂದ್ರಾಳ ನಿವಾಸಿ ಸುದರ್ಶನ್ ಅಲಿಯಾಸ್ ಹರ್ಷ(36) ಕೊಲೆಯಾದವರು. ಶಿರಸಿ ಮುಂಡಗೋಡ ತಾಲೂಕಿನ ಬಡ್ಡಿಗೇರಿ ಎಂಬಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಈ ಕೃತ್ಯ ಎಸಗಿ ಪರಾರಿಯಾಗಿದೆ.
ಬೈಕ್ನಲ್ಲಿ ಹರ್ಷ ಪ್ರಯಾಣಿಸುತ್ತಿದ್ದ ವೇಳೆ ಅವರಿದ್ದ ಬೈಕ್ಗೆ ಕಾರಿನಲ್ಲಿ ಬಂದ ತಂಡ ಕಾರಿನಿಂದ ಡಿಕ್ಕಿ ಹೊಡೆಸಿ ರಸ್ತೆಗೆ ಬೀಳಿಸಿದೆ. ಬಳಿಕ ಮಚ್ಚಿನಿಂದ ಕೊಚ್ಚಿ ಅವರನ್ನು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಮುಂಡಗೋಡ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಆಗಮಿಸಿ ಮುಂದಿನ ಕ್ರಮ ಜರುಗಿಸಿದ್ದಾರೆ. ಕೊಲೆಗೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಿದೆ.
ಹಾಡಹಗಲೇ ಫ್ಯಾನ್ಸಿ ಸ್ಟೋರ್ಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ, ಬೆಚ್ಚಿಬಿದ್ದ ಸ್ಥಳೀಯರು
ಕಾರಿನಲ್ಲೇ ಟಿವಿ ಸೀರಿಯಲ್ ನಟಿಯ ಬೆತ್ತಲೆ ದೃಶ್ಯ ಸೆರೆ! ಮುಂದೆ ಆಗಿದ್ದೆಲ್ಲವೂ ಅವಾಂತರ
ಮಾಲಾಶ್ರೀ ಪತಿ, ನಿರ್ಮಾಪಕ ರಾಮು ಮೃತಪಟ್ಟದ್ದು ಕರೊನಾದಿಂದಲ್ಲ! ಸಾವಿಗೆ ಬೇರೆ ಕಾರಣ ಇದೆ