ಸಾವಿನಲ್ಲೂ ಒಂದಾದ ಅಕ್ಕ-ತಂಗಿ

blank

ನವಲಗುಂದ: ತಂಗಿಯ ಅಂತ್ಯಕ್ರಿಯೆಗೆ ಹೋದ ಅಕ್ಕನೂ ಹೃದಯಾಘಾತದಿಂದ ನಿಧನ ಹೊಂದಿದ ದಾರುಣ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಹುಲಿಕಟ್ಟಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಹುಲಿಕಟ್ಟಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ತಂಗಿ ಯಮನವ್ವ ಎಲ್ಲನಾಯ್ಕರ (70) ನಿಧನ ಹೊಂದಿದ್ದರು. ಇವರ ಅಂತ್ಯಕ್ರಿಯೆಗೆ ಸಹೋದರಿ ನವಲಗುಂದ ತಾಲೂಕಿನ ಜಾವೂರ ಗ್ರಾಮದ ಪಾರ್ವತೆವ್ವ ಶಿವಪ್ಪ ನಾಯ್ಕರ (82)

ತೆರಳಿದ್ದರು. ಈ ವೇಳೆ ತಂಗಿಯ ಅಂತ್ಯಕ್ರಿಯೆ ನಡೆಯುತ್ತಿದ್ದ ವೇಳೆ ದುಃಖ ತಡೆಯಲಾರದೆ ಅಕ್ಕ ಪಾರ್ವತೆವ್ವ ಅವರಿಗೆ ತೀವ್ರ ಹೃದಯಾಘಾತವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಮೂಲಕ ವೃದ್ಧ ಅಕ್ಕ, ತಂಗಿ ಸಾವಿನಲ್ಲೂ ಒಂದಾದ ಘಟನೆ ನಡೆಯಿತು. ಈ ದುಃಖಮಯ ಸನ್ನಿವೇಶ ನೆರೆದಿದ್ದ ಜನರ ಕಣ್ಣಂಚಿನಲ್ಲಿ ನೀರು ಜಿನುಗಿಸಿತು.

ಬೆಳಗಾವಿ ಜಿಲ್ಲೆಯ ಕರಿಕಟ್ಟಿ ಗ್ರಾಮದ ರಾಯಪ್ಪ ಗಂಗಮ್ಮ ಕರಿಯಣ್ಣವನರ ದಂಪತಿಗೆ ಒಟ್ಟು ಐದು ಜನ ಮಕ್ಕಳು. ಅವರಿಗೆ ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರು. ಪಾರ್ವತೆವ್ವ ಅವರಿಗೆ ಇಬ್ಬರು ಪುತ್ರರು, ಆರು ಜನ ಪುತ್ರಿಯರು ಇದ್ದಾರೆ.

Share This Article

ಈ ಮಸಾಲೆಗಳು ವಿಟಮಿನ್ ಬಿ 12 ವೇಗವಾಗಿ ಹೆಚ್ಚಾಗಲು ಸಹಕರಿಸುತ್ತವೆ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಜೀವಸತ್ವಗಳು ದೇಹದ ಕಾರ್ಯನಿರ್ವಹಣೆಗೆ ಮಾತ್ರ ಅಗತ್ಯವಲ್ಲ, ಅವು ಶಕ್ತಿಯನ್ನು ಸಹ ಒದಗಿಸುತ್ತವೆ. ಅವುಗಳ ಕೊರತೆಯು ನರಗಳು,…

ಪಿರಿಯಡ್ಸ್​ ನೋವನ್ನು ಕಡಿಮೆ ಮಾಡುವುದು ಹೇಗೆ?; ಮಹಿಳೆಯರು ತಿಳಿದುಕೊಳ್ಳಲೆಬೇಕಾದ ಮಾಹಿತಿ | Health Tips

ಋತುಬಂಧವನ್ನು ಈ ರೀತಿ ಅರ್ಥಮಾಡಿಕೊಳ್ಳಬಹುದು. ಋತುಬಂಧ ಎಂಬ ಪದವು ಎರಡು ಗ್ರೀಕ್ ಪದಗಳಿಂದ ಬಂದಿದೆ. ಮೆನೊ…

ಬೇಸಿಗೆಯಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚು ತಿನ್ನುತ್ತೀರಾ? ಈ ಮಾಹಿತಿ ನಿಮಗಾಗಿ..garlic

garlic: ಬೆಳ್ಳುಳ್ಳಿ ನಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ.  ಆದರೆ ಬೇಸಿಗೆಯಲ್ಲಿ ಹೆಚ್ಚು ಬೆಳ್ಳುಳ್ಳಿ ತಿಂದರೆ…