More

    ಭಾರತ್​ ಜೋಡೋ ಯಾತ್ರೆಗೆ ನಾಳೆ ಸೋನಿಯಾ ಆಗಮನ: ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್​ ಅಬ್ಬರ

    ಮೈಸೂರು: ಕಾಂಗ್ರೆಸ್​ಗೆ ನವ ಚೈತನ್ಯ ನೀಡುವ ಉದ್ದೇಶದಿಂದ ರಾಹುಲ್​ ಗಾಂಧಿ ಕೈಗೊಂಡಿರುವ ಭಾರತ್​ ಜೋಡೋ ಯಾತ್ರೆಗೆ ಕರ್ನಾಟಕದಲ್ಲಿ ಅಭೂತಪೂರ್ವ ಸ್ಪಂದನೆ ಸಿಗುತ್ತಿದ್ದು, ಮಗನಿಗೆ ಸಾಥ್ ನೀಡಲು ಕಾಂಗ್ರೆಸ್​ನ ರಾಷ್ಟ್ರ ನಾಯಕಿ ಸೋನಿಯಾ ಗಾಂಧಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

    ಇಂದು ಸಂಜೆಯೇ ಕರ್ನಾಟಕಕ್ಕೆ ಸೋನಿಯಾ ಗಾಂಧಿ ಆಗಮಿಸಲಿದ್ದು, ನಾಳೆ ಮೈಸೂರಿನಿಂದ ಆರಂಭವಾಗುವ ಪಾದಯಾತ್ರೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿವೆ. ಹಳೇ ಮೈಸೂರು ಭಾಗಕ್ಕೆ ಕಾಂಗ್ರೆಸ್​ ಹೆಚ್ಚು ಒತ್ತು ಕೊಡುತ್ತಿದ್ದು, ಅ.6ರಂದು ಪ್ರಿಯಾಂಕಾ ಗಾಂಧಿ ಕೂಡ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಪ್ರಿಯಾಂಕ ಗಾಂಧಿ ಪಾದಯಾತ್ರೆ ನಡೆಸಲಿದ್ದಾರೆ.

    ವಿಶೇಷ ವಿಮಾನದ ಮೂಲಕ ಮೈಸೂರಿಗೆ ಸೋನಿಯಾ ಗಾಂಧಿ ಆಗಮಿಸಲಿದ್ದಾರೆ. ನಾಳೆ(ಸೋಮವಾರ)ಪಾದಯಾತ್ರೆ ಮುಗಿದ ಬಳಿಕ ಸೋನಿಯಾ ಕುಟುಂಬ ಕೊಡಗಿಗೆ ತೆರಳಲಿದೆ. ಭಾರತ್ ಜೋಡೋ ಪಾದಯಾತ್ರೆಗೆ ಅ.4 ಮತ್ತು‌ 5 ರಂದು ಬಿಡುವು ಇರುವ ಕಾರಣ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಕೊಡಗಿನ ಖಾಸಗಿ ರೆಸಾರ್ಟ್​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ನಾಳೆ ಮೈಸೂರಿಗೆ ಸೋನಿಯಾ ಗಾಂಧಿ ಆಗಮಿಸುವ ಬಗ್ಗೆ ಇನ್ನೂ ಖಚಿತವಾಗಿಲ್ಲ, ಇಂದು ಸಂಜೆ ಸೋನಿಯಾ ಗಾಂಧಿ ಆಗಮನ ಖಚಿತವಾಗುತ್ತದೆ ಎಂದು ತಿಳಿಸಿದ್ದಾರೆ.

    ICU ಬೆಡ್​ ಮೇಲೆ ಮಲಗಿಕೊಂಡೇ ಸಬ್​ರಿಜಿಸ್ಟ್ರಾರ್​ ಕಚೇರಿಗೆ ಬಂದು ಆಸ್ತಿ ಪತ್ರಕ್ಕೆ ಸಹಿ ಹಾಕಿದ ವೃದ್ಧೆ!

    ಹಸು ಮೇಯಿಸಿಕೊಂಡು ಮನೆಗೆ ತೆರಳುತ್ತಿದ್ದ ಚನ್ನಪಟ್ಟಣದ ರೈತ ದಂಪತಿ ದುರಂತ ಅಂತ್ಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts