ಮತ್ತೆ ಕೈ ತಪ್ಪಿದ ಟಿಕೆಟ್​: ಕಾಂಗ್ರೆಸ್​ ನಾಯಕರ ವಿರುದ್ಧ ಸಿಡಿದೆದ್ದ ಮುದ್ದಹನುಮೇಗೌಡ, ಕುಣಿಗಲ್​ನಲ್ಲಿ ಸ್ಪರ್ಧೆ ಖಚಿತ

ತುಮಕೂರು: ರಾಜ್ಯಸಭೆಗೆ ಟಿಕೆಟ್ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್ ಮುಖಂಡರ ವಿರುದ್ಧ ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಆಕ್ರೋಶ ಹೊರಹಾಕಿದ್ದಾರೆ. ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್​ನಿಂದ ಜೈರಾಮ್​ ರಮೇಶ್​ಗೆ ಟಿಕೆಟ್​ ಒಲಿದಿದೆ. ಇದರ ಬೆನ್ನಲ್ಲೇ ಅಸಮಾಧಾನ ಹೊರಹಾಕಿರುವ  ಎಸ್​.ಪಿ. ಮುದ್ದಹನುಮೇಗೌಡ, ಕಳೆದ ಬಾರಿ ಸಂಸತ್ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ ನೀಡದೆ, ಈಗ ರಾಜ್ಯಸಭೆಯಲ್ಲೂ ಅವಕಾಶ ನೀಡದೆ ನನ್ನನ್ನು ರಾಜಕೀಯದಿಂದ ಮುಗಿಸುವ ಹುನ್ನಾರ ನಡೆಸಿದ್ದಾರೆ ಎಂದು ಹರಿಹಾಯ್ದರು. ನನಗೆ ಟಿಕೆಟ್ ನೀಡದೆ ವಂಚಿಸಿಬಹುದು, ಆದರೆ ಕುಣಿಗಲ್ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಯಲ್ಲಿ  … Continue reading ಮತ್ತೆ ಕೈ ತಪ್ಪಿದ ಟಿಕೆಟ್​: ಕಾಂಗ್ರೆಸ್​ ನಾಯಕರ ವಿರುದ್ಧ ಸಿಡಿದೆದ್ದ ಮುದ್ದಹನುಮೇಗೌಡ, ಕುಣಿಗಲ್​ನಲ್ಲಿ ಸ್ಪರ್ಧೆ ಖಚಿತ