ಉಪ್ಪಿನಂಗಡಿ: ಉದ್ಯಮಿಯೊಬ್ಬರ ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವಾಗಿತ್ತು. ಈ ಬಗ್ಗೆ ಪೊಲೀಸರಿಗೆ ದೂರು ಕೂಡ ಕೊಟ್ಟಿದ್ದರು. ಹಲವು ದಿನಗಳಾದರೂ ವಾಹನ ಪತ್ತೆಯಾಗಿರಲಿಲ್ಲ. ದೇವರ ಮೊರೆಹೋದ ಕ್ಷಣಾರ್ಧದಲ್ಲೇ ವಾಹನ ಸಿಕ್ಕಿದೆ ಎಂದು ಮಾಲೀಕರ ಮೊಬೈಲ್ಗೆ ಸಂದೇಶ ಬಂದಿದೆ!
ಉದ್ಯಮಿ ಸುಂದರ ಗೌಡ ಎಂಬುವರ ದ್ವಿಚಕ್ರ ವಾಹನ ಕಳವಾಗಿತ್ತು. ಈ ಬಗ್ಗೆ ಪೊಲೀಸರಿಗೆ ದೂರು ಸಲ್ಲಿಸಲಾಗಿದ್ದು, ಹಲವು ದಿನಗಳಾದರೂ ವಾಹನ ಪತ್ತೆಯಾಗಿರಲಿಲ್ಲ. ಹೀಗಾಗಿ ಸುಂದರ ಗೌಡ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದರು. ದೇವಸ್ಥಾನದಿಂದ ಹೊರ ಬರಬೇಕೆನ್ನುವಷ್ಟರಲ್ಲಿ ಕಳವಾದ ವಾಹನ ಕೊಡಗಿನ ಶನಿವಾರಸಂತೆ ಸಮೀಪ ಪತ್ತೆಯಾಗಿರುವ ಬಗ್ಗೆ ಮೊಬೈಲ್ಗೆ ಸಂದೇಶ ಬಂದಿದೆ.
ಶನಿವಾರಸಂತೆ ಪರಿಸರದಲ್ಲಿ ಅಪಘಾತಕ್ಕೀಡಾದ ಹಿನ್ನೆಲೆಯಲ್ಲಿ ಕಳ್ಳ ಅದನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದ. ದ್ವಿಚಕ್ರ ವಾಹನವನ್ನು ಉಪ್ಪಿನಂಗಡಿಗೆ ತರಲಾಗಿದೆ. ಇದೆಲ್ಲವೂ ದೇವರ ಪವಾಡ ಎಂದು ಸ್ಥಳೀಯರು ಮಾತನಾಡಿಕೊಳ್ಳುತ್ತಿದ್ದಾರೆ.
ಟ್ರೆಂಡ್ ಆಯ್ತು ಮದ್ವೆ ಆಹ್ವಾನ ಪತ್ರಿಕೆಯಲ್ಲಿ ಅಪ್ಪು ಫೋಟೋ: ಪುನೀತ್ ಅಗಲಿಕೆ ನೋವಲ್ಲೂ ಹೆಚ್ಚುತ್ತಿದೆ ಅಭಿಮಾನ
ಗಂಡನ ಆ ಒಂದು ವಿರೋಧಕ್ಕೆ ನೊಂದು ಮಗು ಜತೆ ಸಾವಿನ ಮನೆಯ ಕದ ತಟ್ಟಿದ ಪತ್ನಿ!
ಪ್ರಿಯಕರನ ಜತೆ ಲಾಡ್ಜ್ಗೆ ಹೋದಾಕೆ ವಾಪಸ್ ಬಂದದ್ದು ಶವವಾಗಿ! ಆ ಕೋಣೆಯಲ್ಲಿತ್ತು ಪುರುಷರಿಬ್ಬರ ಜತೆಗಿನ ರಹಸ್ಯ