ಬಾಗಲಕೋಟೆ: ಸಾರಿಗೆ ನೌಕರರ ಮುಷ್ಕರದ ನಡುವೆಯೂ ಬಸ್ ಚಾಲನೆ ಮಾಡುತ್ತಿದ್ದ ಚಾಲಕನಿಗೆ ಕಿಡಿಗೇಡಿಗಳು ಮನಸೋಇಚ್ಛೆ ಕಲ್ಲು ಬೀಸಿದ್ದು, ಚಾಲಕ ಮೃತಪಟ್ಟ ಘಟನೆ ಜಮಖಂಡಿಯಲ್ಲಿ ಸಂಭವಿಸಿದೆ.
ಜಮಖಂಡಿ ಸಾರಿಗೆ ಘಟಕದ ಬಸ್ ಚಾಲಕ ಎನ್.ಕೆ. ಅವಟಿ (55) ಮೃತ ದುರ್ದೈವಿ. ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಸಾರಿಗೆ ನೌಕರರು ಬೀದಿಗಿಳಿಸುದು ಪ್ರತಿಭಟನೆ ನಡೆಸುತ್ತಿದ್ದಾರೆ. ಸಾರಿಗೆ ಬಸ್ ಸಂಚಾರ ಸ್ಥಗಿತಗೊಂಡು ಪ್ರಯಾಣಿಕರು ಪರದಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮೇಲಧಿಕಾರಿಗಳ ಸೂಚನೆಯಂತೆ ಎನ್.ಕೆ. ಅವಟಿ ಕೆಲಸಕ್ಕೆ ಹಾಜರಾಗಿದ್ದರು.
ಶುಕ್ರವಾರ ವಿಜಯಪುರದಿಂದ ಜಮಖಂಡಿ ನಗರಕ್ಕೆ ಬಸ್ ಚಲಾಯಿಸಿಕೊಂಡು ಎನ್.ಕೆ. ಅವಟಿ ಬರುತ್ತಿದ್ದರು. ಜಮಖಂಡಿಯ ಕವಟಗಿ ಪುನರ್ವಸತಿ ಕೇಂದ್ರದ ಬಳಿ ಬಸ್ ಅನ್ನು ಅಡ್ಡಗಟ್ಟಿದ ಕಿಡಿಗೇಡಿಗಳು ಬಸ್ನತ್ತ ಕಲ್ಲು ತೂರಿದ್ದಾರೆ. ಬಸ್ ಮುಂಭಾಗದ ಕಲ್ಲುಗಳು ಗಾಜನ್ನು ಒಡೆದುಕೊಂಡು ಒಳ ತೂರಿ ಚಾಲಕನ ಮೇಲೆ ಬಿದ್ದಿದೆ. ಕಲ್ಲಿನೇಟಿಗೆ ಚಾಲಕ ಸ್ಥಿತಿ ಗಂಭೀರವಾಗಿತ್ತು. ಕುತ್ತಿಗೆಗೆ ಕಲ್ಲು ಬೀಳುತ್ತಿದ್ದಂತೆ ತಕ್ಷಣವೇ ವಾಹನ ನಿಲ್ಲಿಸಿದ ಚಾಲಕ ಅರೆ ಪ್ರಜ್ಞಾವಸ್ಥೆಗೆ ತಲುಪಿದ್ದರು. ದಿಢೀರ್ ಘಟನೆಯಿಂದ ಪ್ರಯಾಣಿಕರು ಗಾಬರಿಗೊಂಡರು.
ಕೂಡಲೇ ಚಾಲಕನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟರು. ಕರ್ತವ್ಯಕ್ಕೆ ಹಾಜರಾಗಿ ಸಾವಿಗೀಡಾದ ಚಾಲಕನ ಬಗ್ಗೆ ಪ್ರಯಾಣಿಕರು ಮರುಕ ವ್ಯಕ್ತಪಡಿಸಿದರು. ಮೃತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಅಪ್ರಾಪ್ತರ ಲವ್ ಕೇಸ್: ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷನಿಂದ ಬಿತ್ತು ಬಾಲಕನ ಹೆಣ, ಊರಲ್ಲಿ ಪ್ರಕ್ಷುಬ್ಧ ವಾತಾವರಣ
ಕಾಡ್ಗಿಚ್ಚಿನಲ್ಲಿ ಸುಟ್ಟುಕರಕಲಾಗಿದ್ದ ವ್ಯಕ್ತಿ ಪ್ರಕರಣ: ಬ್ಯಾನರ್ ಕೊಟ್ಟ ಸುಳಿವಿಂದ ಬಯಲಾಯ್ತು ನಿಗೂಢ ರಹಸ್ಯ
ಗಂಡನ ಬಿಟ್ಟು ಅತ್ತೆಮಗನ ಜತೆ ಬಂದವಳ ಬದುಕಲ್ಲಿ ದುರಂತ! ಪ್ರಿಯಕರನಿಂದಲೇ ನಡೆಯಿತು ಘೋರ ಕೃತ್ಯ