ಬೆಂಗಳೂರು: ವಿದ್ಯಾರ್ಥಿ ಬಸ್ಪಾಸ್ ಅವಧಿಯನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು(ಕೆಎಸ್ಆರ್ಟಿಸಿ) ವಿಸ್ತರಿಸಿದೆ.
ಬಹುತೇಕ ವಿದ್ಯಾರ್ಥಿಗಳಿಗೆ ನವೆಂಬರ್ವರೆಗೆ ಪರೀಕ್ಷೆಗಳು ನಡೆಯಲಿದೆ. ಹಾಗಾಗಿ ಕಳೆದ ಸಾಲಿನ ವಿದ್ಯಾರ್ಥಿ ಬಸ್ಪಾಸ್ ಅವಧಿಯನ್ನು ನವೆಂಬರ್ವರೆಗೂ ಕೆಎಸ್ಆರ್ಟಿಸಿ ವಿಸ್ತರಿಸಿದೆ. ಅಕ್ಟೋಬರ್ನಲ್ಲಿ ಡಿಪ್ಲೊಮಾ, ಬಿ.ಇಡಿ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳಿವೆ. ಈ ಮೂರು ಕೋರ್ಸ್ಗಳ ಪರೀಕ್ಷೆಗಳು ನವೆಂಬರ್ ತಿಂಗಳಿಗೆ ಮುಂಚಿತವಾಗಿ ಮುಗಿದರೆ, ಪರೀಕ್ಷಾ ಅವಧಿವರೆಗೆ ಮಾತ್ರ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗುವುದು. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ವಿದ್ಯಾರ್ಥಿಗಳು ಪಾಸ್ ಕೌಂಟರ್ಗಳಲ್ಲಿ ಅವಧಿ ವಿಸ್ತರಣೆಯ ಸಹಿ ಹಾಗೂ ಮೊಹರು ಪಡೆದುಕೊಳ್ಳಬೇಕು.
ಈಗಾಗಲೇ ಪ್ರಸಕ್ತ ಸಾಲಿನ ವಿದ್ಯಾರ್ಥಿ ಬಸ್ಪಾಸ್ ಪಡೆಯಲು ಸೇವಾ ಸಿಂಧು ವೆಬ್ ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಪಾಸ್ ಪಡೆಯಲು ಹೆಚ್ಚಿನ ಕಾಲಾವಕಾಶ ನೀಡುವ ಸಂಬಂಧ ಕಳೆದ ಸಾಲಿನ ಬಸ್ ಪಾಸ್ ಅಥವಾ ಶಾಲಾ-ಕಾಲೇಜು ದಾಖಲಾತಿಯ ಶುಲ್ಕ ರಶೀದಿ ತೋರಿಸಿ ಸೆ.25ರ ವರೆಗೆ ನಿಗಮದ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ನ್ಯಾಕ್ ಮಾನ್ಯತೆಯಲ್ಲಿ A+ ಗ್ರೇಡ್ ಕಳೆದುಕೊಂಡ ಮೈಸೂರು ವಿಶ್ವವಿದ್ಯಾಲಯ!
ಟ್ಯೂಷನ್ ಮುಗಿಸಿ ಮನೆಗೆ ಬಂದ ಬಾಲಕ ಚೀರಾಡುತ್ತಾ ಹೊರ ಓಡಿದ… ಒಳಹೊಕ್ಕ ಸ್ಥಳೀಯರಿಗೆ ಕಾದಿತ್ತು ಶಾಕ್!
ಬೇಲೂರಿನ ಪ್ರೇಮಿಗಳು ಶಿವಮೊಗ್ಗದಲ್ಲಿ ಪತ್ತೆ! ಪ್ರಿಯಕರ ವಾಹನದಿಂದ ಜಿಗಿಯುತ್ತಿದ್ದಂತೆ ಪ್ರೇಯಸಿ ಹೈಡ್ರಾಮ
ಪ್ರಿಯಕರನ ಕೊಲ್ಲಲು ಮತ್ತೊಬ್ಬನೊಂದಿಗೆ ವಿವಾಹಿತೆಯ ಕಾಮದಾಟ: ಬೆಚ್ಚಿಬೀಳಿಸುತ್ತೆ ಇವಳ ಅಸಲಿ ಮುಖ!