ಬೆಂಗಳೂರು: ಪರೀಕ್ಷೆಗೆ ಹಾಜರಾಗಬೇಕಿದ್ದ ದಿನವೇ ಮಿಲಿಟರಿ ಶಾಲಾ ವಿದ್ಯಾರ್ಥಿಯೊಬ್ಬ ತಲೆಗೆ ಗುಂಡು ಹಾರಿಸಿಕೊಂಡು ಮೃತಪಟ್ಟ ಘಟನೆ ಸಂಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದೆ.
ಉತ್ತರಾಖಂಡ್ ಮೂಲದ ಭಗತ್ ಸಿಂಗ್ ಮತ್ತು ಬಾಬ್ನಾ ದಂಪತಿಯ ಪುತ್ರ ರಾಹುಲ್ ಭಂಡಾರಿ(17) ಮೃತ ದುರ್ದೈವಿ. ರಾಹುಲ್ ತಂದೆ ಸೇನೆಯ ನಿವೃತ್ತ ಹವಾಲ್ದಾರ್. 20 ವರ್ಷದಿಂದ ಬೆಂಗಳೂರಿನಲ್ಲೇ ನೆಲೆಸಿರುವ ಕುಟುಂಬ, ಆರ್.ಟಿ. ನಗರದಲ್ಲಿ ಮನೆ ಮಾಡಿಕೊಂಡು ವಾಸವಿದೆ. ಓದಿನಲ್ಲಿ ಮುಂದಿದ್ದ ರಾಹುಲ್ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.90 ಅಂಕ ಪಡೆದಿದ್ದ. ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ ಇತ್ತು. ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ ರಾಹುಲ್, ಮಾನಸಿಕ ಒತ್ತಡ ನಿವಾರಣೆಗಾಗಿ ಬೆಳಗಿನ ಜಾವ ವಾಕಿಂಗ್ ಮಾಡುವ ಹವ್ಯಾಸ ಇಟ್ಟುಕೊಂಡಿದ್ದ.
ನಿನ್ನೆ ರಾತ್ರಿ ಊಟ ಮಾಡಿ ಮನೆಯಲ್ಲೇ ಮಲಗಿದ್ದ ರಾಹುಲ್, ಬೆಳಗಿನ ಜಾವ 4ರ ಸಮಯದಲ್ಲಿ ಎಂದಿನಂತೆ ಮನೆಯಿಂದ ಹೊರ ಬಂದಿದ್ದ. ಸಮಯ 6 ಆದರೂ ಮಗ ವಾಪಸ್ ಮನೆಗೆ ಬಂದಿರಲಿಲ್ಲ. ಅವನ ಮೊಬೈಲ್ಗೆ ಪಾಲಕರು ಕರೆ ಮಾಡಿದರೂ ಸ್ವೀಕರಿಸಲಿಲ್ಲ. ಅಷ್ಟೊತ್ತಿಗೆ ಸಂಜಯನಗರ ಮುಖ್ಯರಸ್ತೆಯ ಬಸ್ ನಿಲ್ದಾಣ ಬಳಿ ತಲೆಗೆ ಗುಂಡೇಟು ಬಿದ್ದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬನ ಶವ ಇರುವ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದರು.
ರಾಹುಲ್ ಜೇಬಿನಲ್ಲಿದ್ದ ಮೊಬೈಲ್ ರಿಂಗಣಿಸುತ್ತಲೇ ಇತ್ತು. ಪೊಲೀಸರು ಕರೆ ಸ್ವೀಕರಿಸುತ್ತಿದ್ದಂತೆ, ಎಲ್ಲಿದ್ದೀಯ ಮಗನೇ? ಇಷ್ಟೊತ್ತಾದರೂ ಏಕೆ ಮನೆಗೆ ಬಂದಿಲ್ಲ? ಎಂದು ಪಾಲಕರು ಕೇಳಿದ್ದು, ಅದಕ್ಕುತ್ತರಿಸಿದ ಪೊಲೀಸರು ಮಗನ ಸಾವಿನ ಬಗ್ಗೆ ಹೇಳಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಕುಟುಂಬಸ್ಥರ ಆಕ್ರಂದ ಮುಗಿಲು ಮುಟ್ಟಿತ್ತು. ರಾಹುಲ್ನ ಅಕ್ಕ, ನನ್ನ ತಮ್ಮನಿಗೆ ಏನೂ ಆಗಿಲ್ಲ. ಎದ್ದೇಳು ರಾಹುಲ್… ಎಂದು ಗೋಳಾಡುತ್ತಿದ್ದ ದೃಶ್ಯ ಮನಕಲಕುವಂತಿತ್ತು. ತಂದೆಯ ಪಿಸ್ತೂಲ್ನಿಂದಲೇ ಗುಂಡು ಹಾರಿಸಿಕೊಂಡು ರಾಹುಲ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಹಿಳೆಯನ್ನ ನಗ್ನಗೊಳಿಸಿ ಹಿಂಸಿಸಿದ್ದ ಕೇಸ್ಗೆ ಬಿಗ್ ಟ್ವಿಸ್ಟ್! ಆಕೆಯ ಕಾಟ ತಡೆಯಲಾಗದೆ ಹಾಗೇ ಮಾಡಿದ್ವಿ…
ಕರೊನಾ ಎಂಬುದು ಕೇವಲ 1 ಗ್ರಾಂ ಅಷ್ಟೆ, ಇನ್ನೂ 8 ವರ್ಷ ಸಾವು-ನೋವು ಕಾಡುತ್ತೆ: ಭವಿಷ್ಯ ನುಡಿದ ಕೋಡಿಶ್ರೀಗಳು
ಮಗುವಿಗೆ ಜನ್ಮ ನೀಡಿ ಅವಿವಾಹಿತೆ ಸಾವು: ಆ ಇಬ್ಬರಲ್ಲಿ ಮಗುವಿನ ತಂದೆ ಯಾರು? ಶಿವಮೊಗ್ಗದಲ್ಲೊಂದು ವಿಚಿತ್ರ ಲವ್ ಕೇಸ್