ಎಚ್ಚೆತ್ತುಕೊಳ್ಳದ ಖಾಸಗಿ ಬಸ್​​: ಅಪಾಯ ಲೆಕ್ಕಿಸದೇ ಬಸ್​​ ಮೇಲೆ ಕುಳಿತು ವಿದ್ಯಾರ್ಥಿಗಳ ಪ್ರಯಾಣ

ಚಿಕ್ಕಬಳ್ಳಾಪುರ: ಇದೇ ವರ್ಷದ ಆರಂಭದಲ್ಲಿ ಪಾವಗಡದಲ್ಲಿ ಸಂಬವಿಸಿದ ಬಸ್​ ದುರಂತದ ಬಳಿಕವೂ ಖಾಸಗಿ ಬಸ್​​ಗಳು ಹಾಗೂ ಸಾರ್ವಜನಿಕರು ಎಚ್ಚೆತ್ತುಕೊಂಡಿರುವಂತೆ ಕಾಣುತ್ತಿಲ್ಲ. ಈ ನಡುವೆ ಜಿಲ್ಲಾಡಳಿತ ಕೂಡ ಅಗತ್ಯಕ್ಕಿಂತ ಹೆಚ್ಚು ಪ್ರಯಾಣಿಕರನ್ನು ಬಸ್​​ನಲ್ಲಿ ಸಂಚಸಿರುವಂತಿಲ್ಲ ಎಂಬ ಆದೇಶವನ್ನೂ ನೀಡಿದೆ. ಜಿಲ್ಲಾಡಳಿತದ ಮಾತಿಗೂ ಕವಡೆ ಕಾಸಿನ ಕಿಮ್ಮತ್ತು ನೀಡದ ಖಾಸಗಿ ಬಸ್​​ಗಳು ಮಾತ್ರ ತಮ್ಮ ಹಳೆ ಚಾಳಿಯನ್ನು ಮುಂದುವರಿಸಿವೆ. ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನಲ್ಲಿ ವಿದ್ಯಾರ್ಥಿಗಳು ಖಾಸಗಿ ಬಸ್​ ಟಾಪ್​ ಮೇಲೆ ಕುಳಿತು ತಮ್ಮ ಪ್ರಾಣವನ್ನೂ ಲೆಕ್ಕಿಸದೇ ಪ್ರಯಾಣ ಮಾಡುತ್ತಿದ್ದಾರೆ. … Continue reading ಎಚ್ಚೆತ್ತುಕೊಳ್ಳದ ಖಾಸಗಿ ಬಸ್​​: ಅಪಾಯ ಲೆಕ್ಕಿಸದೇ ಬಸ್​​ ಮೇಲೆ ಕುಳಿತು ವಿದ್ಯಾರ್ಥಿಗಳ ಪ್ರಯಾಣ