More

    ಹಲ್ಲುಗಳಿಗೆ ಕ್ಲಿಪ್​ ಹಾಕಿಸಲು ಆಸ್ಪತ್ರೆಗೆ ಹೋದ ಯುವಕ ಸಾವು! ಕೋಮಾಗೆ ದೂಡಿ ಸಾವಿಗೆ ಕಾರಣವಾದ್ರಾ ವೈದ್ಯರು?

    ಕಲಬುರಗಿ: ಹಲ್ಲುಗಳಿಗೆ ಕ್ಲಿಪ್​ ಹಾಕಿಸಿಕೊಳ್ಳಲೆಂದು ಆಸ್ಪತ್ರೆಗೆ ಬಂದ ಯುವಕನೊಬ್ಬ ಮೃತಪಟ್ಟ ಘಟನೆ ಕಲಬುರಗಿ ನಗರದಲ್ಲಿ ಸಂಭವಿಸಿದೆ.

    ಕಲಬುರಗಿಯ ಆನಂದ ನಗರದ ನಿವಾಸಿ ಶಶಾಂಕ್(18) ಮೃತ ದುರ್ದೈವಿ. 3 ದಿನಗಳ ಹಿಂದೆ ಹಲ್ಲುಗಳಿಗೆ ಕ್ಲಿಪ್ ಹಾಕಿಸಿಕೊಳ್ಳಲು ನಗರದ ಖಾಸಗಿ ಆಸ್ಪತ್ರೆಗೆ 3 ದಿನಗಳ ಹಿಂದೆ ಶಶಾಂಕ್​ ಬಂದಿದ್ದ. ಚಿಕಿತ್ಸೆ ವೇಳೆ ವೈದ್ಯರು ಯುವಕನಿಗೆ ಅನಸ್ತೇಶಿಯಾ ನೀಡಿದ್ದರು. ಕೆಲವೇ ನಿಮಿಷದಲ್ಲಿ ಪ್ರಜ್ಞೆತಪ್ಪಿದ ಯುವಕ ಕೋಮಾಗೆ ಜಾರಿದ್ದ. ಮೂರು ದಿನವಾದರೂ ಪ್ರಜ್ಞೆ ಬರಲೇ ಇಲ್ಲ. ಸೋಮವಾರ ರಾತ್ರಿ ಕೊನೆಯುಸಿರೆಳೆದಿದ್ದಾನೆ.

    ವೈದ್ಯರ ನಿರ್ಲಕ್ಷ್ಯದಿಂದಲೇ ಶಶಾಂಕ್​ ಮೃತಪಟ್ಟಿದ್ದಾನೆ ಎಂದು ಆರೋಪಿಸಿ ಆಸ್ಪತ್ರೆ ಮುಂದೆ ಮೃತನ ಸಂಬಂಧಿಕರು ಮತ್ತು ಸ್ನೇಹಿತರು ಪ್ರತಿಭಟನೆ ನಡೆಸಿದರು. ಮೃತನ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು ಎಂದು ಆಗ್ರಹಿಸಿದರು. ಸ್ಥಳಕ್ಕೆ ಬಂದ ಸ್ಟೇಷನ್ ಬಜಾರ್ ಠಾಣೆ ಪೊಲೀಸರು, ಪ್ರತಿಭಟನಾಕಾರರ ಮನವೊಲಿಸಿದರು. ವೈದ್ಯರ ನಿರ್ಲಕ್ಷ್ಯದಿಂದಲೇ ಯುವಕನ ಸಾವಾಗಿದ್ದರೆ ತಕ್ಕ ಶಿಕ್ಷೆ ಆಗಲಿದೆ ಎಂದು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದರು. ಸ್ಟೇಷನ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ.

    ಸಾರಿಗೆ ಬಸ್​ ಡ್ರೈವರ್​-ಕಂಡಕ್ಟರ್​ ಮೇಲೆ ಡಿಪೋ ಮ್ಯಾನೇಜರ್​ ದಬ್ಬಾಳಿಕೆ: ವಿಡಿಯೋ ವೈರಲ್​

    ಗಂಡನಿಗೆ ಹುಡುಗೀರ ಶೋಕಿ, ನನ್ನನ್ನು ಜೀವಂತ ಶವ ಮಾಡಿದ್ದಾನೆ, ಕಿರುಕುಳ ಸಹಿಸಲಾಗ್ತಿಲ್ಲ… ಕಣ್ಣೀರು ತರಿಸುತ್ತೆ ಈ ಸ್ಟೋರಿ

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts