More

    ಬಾಡಿಗೆ ಮನೆ ಕೇಳುವ ನೆಪದಲ್ಲಿ ಬಂದ ಖದೀಮರು; ಚಿನ್ನ, ನಗದಿನೊಂದಿಗೆ ಪರಾರಿ

    ನೆಲಮಂಗಲ: ಮನೆ ಬಾಡಿಗೆ ಕೇಳುವ ನೆಪದಲ್ಲಿ ಬಂದು ಕಳ್ಳತನ ನಡೆಸಿದ ಘಟನೆ ಪೆಮ್ಮನಹಳ್ಳಿ ಗ್ರಾಮದ ರೇಣುಕಾ ಎಂಬುವರ ಮನೆಯಲ್ಲಿ ನಡೆದಿದೆ.

    ಮನೆ ಬಾಡಿಗೆ ಕೇಳುವ ನೆಪದಲ್ಲಿ ಕಳ್ಳರು ರೇಣುಕಾ ಅವರ ಮನೆಗೆ ಬಂದಿದ್ದಾರೆ. ಈ ವೇಳೆ ಮನೆಯ ಬೀಗದ ಕೀ ಇಡುವ ಸ್ಥಳವನ್ನು ನೋಡಿಕೊಂಡಿದ್ದಾರೆ. ರೇಣುಕಾ ಚಿಲ್ಲರೆ ಅಂಗಡಿ ಇಟ್ಟುಕೊಂಡು ವ್ಯಾಪಾರ ನಡೆಸುತ್ತಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭವನ್ನು ನೋಡಿಕೊಂಡು ಕಳ್ಳರು ಮನೆಯೊಳಗೆ ನುಗ್ಗಿದ್ದಾರೆ.

    ಕಳ್ಳರು ಮನೆಯ ಕಪಾಟನ್ನು ಶೋಧಿಸಿದ್ದಾರೆ. ಈ ವೇಳೆ ಸುಮಾರು 40 ಗ್ರಾಂ. ತೂಕದ ಚಿನ್ನದ ಚೈನು ಮತ್ತು 1 ಲಕ್ಷ ನಗದು ದೋಚಿದ್ದಾರೆ. ಈ ಬಗ್ಗೆ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts