ಬೆಂಗಳೂರು: ಮೇಕೆದಾಟು ಯೋಜನೆಗೆ ರಾಜ್ಯ ಬಜೆಟ್ನಲ್ಲಿ ಒಂದು ಸಾವಿರ ಕೋಟಿ ರೂಪಾಯಿ ಮೀಸಲಿಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಕಾಂಗ್ರೆಸ್ ನಡೆಸಿದ ಮೇಕೆದಾಟು ಯೋಜನೆ ಜಾರಿಯನ್ನು ಪ್ರತಿಷ್ಠಯನ್ನಾಗಿ ಸ್ವೀಕರಿಸಿದ್ದ ರಾಜ್ಯ ಕಾಂಗ್ರೆಸ್, ಡಿಕೆಶಿ ನೇತೃತ್ವದಲ್ಲಿ ಹಲವು ಅಡೆ ತಡೆಗಳ ನಡುವೆಯೂ ಪಾದಯಾತ್ರೆ ಮಾಡಿದೆ. ಇದೀಗ ರಾಜ್ಯ ಸರ್ಕಾರವೂ ಮೇಕೆದಾಟು ಯೋಜನೆಗೆ ಸಾವಿರ ಕೋಟಿ ಹಣ ಮೀಸಲಿಟ್ಟಿದೆ. ಇದರ ಜತೆಗೆ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಕೋಟ್ಯಂತರ ಅನುದಾನ ಹಂಚಿಕೆ ಮಾಡಲಾಗಿದೆ.
- ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತಕ್ಕೆ 5 ಸಾವಿರ ಕೋಟಿ
- ಕಳಸಾ ಮತ್ತು ಬಂಡೂರಿ ನಾಲಾ ತಿರುವು ಯೋಜನೆಗೆ 1 ಸಾವಿರ ಕೋಟಿ ರೂ.
- ಭದ್ರಾ ಮೇಲ್ದಂಡೆ ಯೋಜನೆಗೆ 3 ಸಾವಿರ ಕೋಟಿ ರೂ.
- ಎತ್ತಿನಹೊಳೆ ಯೋಜನೆಗೆ 3 ಸಾವಿರ ಕೋಟಿ ರೂ. ಅನುದಾನ
ಬಸವರಾಜ ಬೊಮ್ಮಾಯಿ ಚೊಚ್ಚಲ ಬಜೆಟ್: ಸೂಟ್ಕೇಸ್ ಬದಲು ಫೈಲ್ ತಂದ ಸಿಎಂ