ಅಗಲಿದ ಪತ್ನಿಯ ಫೋಟೋಗೆ ಹೂ ತರಲು ಬಂದ ಗಂಡನ ಪ್ರಾಣವನ್ನೂ ಹೊತ್ತೊಯ್ದ ಜವರಾಯ!

ಯಳಂದೂರು: ಅಗಲಿದ ಪತ್ನಿಯ ಫೋಟೋಗೆ ಹೂ ತರಲೆಂದು ಮನೆಯಿಂದ ಹೊರಬಂದ ಗಂಡನ ಮೇಲೆ ಟೆಂಪೋ ಹರಿದಿದ್ದು, ಆತ ಸ್ಥಳದಲ್ಲೇ ದುರಂತ ಅಂತ್ಯ ಕಂಡ ಹೃದಯ ವಿದ್ರಾವಕ ಘಟನೆ ಚಾಮರಾಜನಗರ ಜಿಲ್ಲೆ ಯಳಂದೂರು ಪಟ್ಟಣದಲ್ಲಿ ಸಂಭವಿಸಿದೆ. ಯರಗಂಬಳ್ಳಿ ಗ್ರಾಮದ ಮರಿಸ್ವಾಮಿ(40) ಮೃತರು. ಇವರ ಪತ್ನಿ ಇತ್ತೀಚಿಗೆ ಕರೊನಾ ಸೋಂಕಿಗೆ ಬಲಿಯಾಗಿದ್ದರು. ಮನೆಯಲ್ಲಿದ್ದ ಪತ್ನಿಯ ಫೋಟೋಗೆ ಹೂ ಹಾಕಲೆಂದು ಇಂದು ಬೆಳಗ್ಗೆ ಹೂ ಖರೀದಿಸಿ ತರಲು ಪಟ್ಟಣಕ್ಕೆ ಮರಿಸ್ವಾಮಿ ಬಂದಿದ್ದರು. ಯಳಂದೂರು ಪಟ್ಟಣದ ಬಸ್ ನಿಲ್ದಾಣ ಸಮೀಪ ರಾಷ್ಟ್ರೀಯ ಹೆದ್ದಾರಿ … Continue reading ಅಗಲಿದ ಪತ್ನಿಯ ಫೋಟೋಗೆ ಹೂ ತರಲು ಬಂದ ಗಂಡನ ಪ್ರಾಣವನ್ನೂ ಹೊತ್ತೊಯ್ದ ಜವರಾಯ!