More

    ಸ್ವಯಂ ಸುರಕ್ಷತೆಗೆ ಕಾಲೇಜು ಯುವತಿಯರಿಗೆ ತರಬೇತಿ: ಬೊಮ್ಮಾಯಿ ಹೇಳಿಕೆ

    ಹುಬ್ಬಳ್ಳಿ: ಸುರಕ್ಷತೆ ದೃಷ್ಟಿಯಿಂದ ರಾಜ್ಯದ ಎಲ್ಲ ಕಾಲೇಜುಗಳಲ್ಲಿ ಯುವತಿಯರಿಗೆ ಸ್ವಯಂ ರಕ್ಷಣಾ ತರಬೇತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

    ಪೊಲೀಸ್ ಹುತಾತ್ಮ ದಿನದ ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜತೆ ಗುರುವಾರ ‌ಮಾತನಾಡಿದ‌ ಸಿಎಂ, ಸ್ವಯಂ ಸುರಕ್ಷತೆಗೆ ತರಬೇತಿ ನೀಡುವ ಕೆಲಸವನ್ನು ಕೆಎಸ್​ಆರ್​ಪಿಗೆ ವಹಿಸಲಾಗುವುದು. ಪೊಲೀಸ್ ತರಬೇತಿ ಶಾಲೆಗಳಲ್ಲಿ ಕೆಲಸ ಮಾಡಿದ ನಿವೃತ್ತ ಪ್ರಾಂಶುಪಾಲರನ್ನು ತರಬೇತಿ‌ ನೀಡಲು ಬಳಸಿಕೊಳ್ಳಲಾಗುವುದು ಎಂದರು.

    ಕೇರಳ ಹಾಗೂ ಉತ್ತರಾಖಂಡ ಭೂ ಕುಸಿತ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಈ ಕುರಿತು ಕೇರಳ ಮುಖ್ಯಮಂತ್ರಿ ಜತೆ ಚರ್ಚಿಸಿದ್ದೇನೆ. ಅಗತ್ಯ ನೆರವು‌ ನೀಡುವುದಾಗಿಯೂ ತಿಳಿಸಿದ್ದೇನೆ ‌ಎಂದರು.

    ಉತ್ತರಾಖಂಡದಲ್ಲಿ ಸಿಲುಕಿರುವ ಕರ್ನಾಟಕದವರ ರಕ್ಷಣೆಗಾಗಿ ಕ್ರಮ‌ ಕೈಗೊಳ್ಳಲಾಗಿದೆ. ತುಷಾರ್ ಗಿರಿನಾಥ್ ಅವರನ್ನು ನೋಡಲ್ ಅಧಿಕಾರಿಯಾಗಿ‌ ನೇಮಿಸಲಾಗಿದೆ ಎಂದು ತಿಳಿಸಿದರು.

    ಉಪಚುನಾವಣೆ ಪ್ರಚಾರದಲ್ಲಿ ವೈಯಕ್ತಿಕ ನಿಂದನೆಗಳೇ ಹೆಚ್ಚಾಗುತ್ತಿವೆಯಲ್ಲ ಎನ್ನುವ ಪ್ರಶ್ನೆಗೆ ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ. ಚುನಾವಣೆ ಜನರ ಧ್ವನಿಯಾಗಿದೆ. ಜನರ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಸೀಮಿತರಾದರೆ ಜನಪ್ರತಿನಿಧಿಗಳಿಗೆ ಒಳ್ಳೆಯದು. ಜನರ ಮನಸ್ಸು ಗೆಲ್ಲುವ ಮಾತುಗಳನ್ನಾಡಬೇಕೆ ಹೊರತು ಇನ್ನೊಬ್ಬರನ್ನು ನಿಂದಿಸುವ ಕೆಲಸ ಮಾಡಬಾರದು ಎಂದರು.

    ಪೊಲೀಸರ ಸೇವೆಯನ್ನು ನಾಗರಿಕ ಸಮಾಜ ಗೌರವಿಸಬೇಕು: ಪೊಲೀಸ್​ ಹುತಾತ್ಮ ದಿನಾಚರಣೆಯಲ್ಲಿ ಸಿಎಂ ಕರೆ

    ಪ್ರೇಯಸಿ ಹೆಸರಲ್ಲಿ ಕೊಡಗು ಎಸ್​ಪಿಗೆ ಪತ್ರ ಬರೆದು ಮಧ್ಯಪ್ರದೇಶದಲ್ಲಿ ಪೊನ್ನಂಪೇಟೆ ಮೂಲದ ಯುವಕ ಆತ್ಮಹತ್ಯೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts