ತುಮಕೂರಿನ ಮಹಿಳಾ ಪೇದೆ ಹಾಸನದಲ್ಲಿ ಶವವಾಗಿ ಪತ್ತೆ! ಅಕ್ಕನನ್ನೇ ಕೊಂದು ಲಾಡ್ಜ್​ನಲ್ಲಿ ದುರಂತ ಅಂತ್ಯ ಕಂಡ ತಮ್ಮ

ತುಮಕೂರು: ನಾಪತ್ತೆಯಾಗಿದ್ದ ಹುಳಿಯಾರು ಪೊಲೀಸ್ ಠಾಣೆ ಮಹಿಳಾ ಪೇದೆ ಎಸ್.ಸುಧಾ(39) ಶವವಾಗಿ ಅರಸೀಕೆರೆ ತಾಲೂಕಿನ ಪೊದೆಯೊಂದರಲ್ಲಿ ಪತ್ತೆಯಾಗಿದ್ದಾರೆ. ಸೆ.13ರಂದು ಸುಧಾ ನಾಪತ್ತೆಯಾಗಿದ್ದರು. ಈ ನಡುವೆ ಇವರ ಚಿಕ್ಕಪ್ಪನ ಮಗ, ಚಿಕ್ಕನಾಯಕನಹಳ್ಳಿ ತಾಲೂಕು ಹುಳಿಯಾರು ಹೋಬಳಿ ಕೆರೆಸೂರಗೊಂಡನಹಳ್ಳಿಯ ಮಂಜುನಾಥ್(26) ಶಿವಮೊಗ್ಗ ನಗರದ ಲಾಡ್ಜ್​ವೊಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ. ಇದಕ್ಕೂ ಮುನ್ನ ಅಂದರೆ ಸೆ.13ರಂದು ಸುಧಾ ಮತ್ತು ಮಂಜುನಾಥ್​ ಇಬ್ಬರೂ ಚಿಕ್ಕನಾಯಕನಹಳ್ಳಿಯಲ್ಲಿ ಜತೆಯಾಗಿ ಕಾರಿನಲ್ಲಿ ಹೊರಟಿದ್ದರು. ಸಂಜೆ 8.40ರಿಂದ ಇಬ್ಬರ ಫೋನ್ ಸಂಪರ್ಕ ಕಡಿತವಾಗಿತ್ತು. ಸುಧಾ ನಾಪತ್ತೆಯಾಗಿದ್ದಾರೆ ಎಂದು ಹುಳಿಯಾರು ಪೊಲೀಸ್​ … Continue reading ತುಮಕೂರಿನ ಮಹಿಳಾ ಪೇದೆ ಹಾಸನದಲ್ಲಿ ಶವವಾಗಿ ಪತ್ತೆ! ಅಕ್ಕನನ್ನೇ ಕೊಂದು ಲಾಡ್ಜ್​ನಲ್ಲಿ ದುರಂತ ಅಂತ್ಯ ಕಂಡ ತಮ್ಮ