ತುಮಕೂರು: ಇಲ್ಲೊಬ್ಬ ಲಾಡ್ಜ್ನಲ್ಲಿ ತನ್ನ ಪತ್ನಿಯ ಕಾಲನ್ನೇ ಕತ್ತರಿಸಿದ್ದಾನೆ. ಬಳಿಕ ಲಾಡ್ಜ್ ಮಾಲೀಕರ ಬಳಿ ಬಂದು ‘ಹೆಂಡತಿಯ ಕಾಲು ಕತ್ತರಿಸಿದ್ದೇನೆ. ಆಕೆಯನ್ನು ಆಸ್ಪತ್ರೆಗೆ ಸೇರಿಸಬೇಕು. ನಾಲ್ವರು ಹುಡುಗರನ್ನು ಕಳುಹಿಸಿ’ ಎಂದಿದ್ದಾನೆ. ಅಷ್ಟೇ ಅಲ್ಲ, ತನ್ನ ಹೊಟ್ಟೆಗೆ ತಾನೇ ಚಾಕುವಿನಿಂದ ಇರಿದುಕೊಂಡಿದ್ದಾನೆ…
ಇಂತಹ ಅಮಾನುಷ ಘಟನೆ ತುಮಕೂರಿನ ಅಶೋಕ ಲಾಡ್ಜ್ ಆ್ಯಂಡ್ ಹೋಟೆಲ್ನಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ. ಗಂಡನಿಂದ ಹಲ್ಲೆಗೆ ಒಳಗಾದಾಕೆ ಹೆಸರು ಅನಿತಾ. ಈಕೆಯ ಗಂಡ ಬಾಬು ಆರೋಪಿ. ನಾಲ್ಕು ವರ್ಷದ ಹಿಂದೆ ಮಧುಗಿರಿ ಮೂಲದ ಅನಿತಾಳನ್ನು ಗದಗ ಮೂಲದ ಬಾಬು ಮದುವೆ ಆಗಿದ್ದ. ಇಂದು(ಬುಧವಾರ) ಬೆಳಗ್ಗೆ 6 ಗಂಟೆಗೆ ಅಶೋಕ್ ಲಾಡ್ಜ್ಗೆ ಬಂದ ದಂಪತಿ ರೂಂ ಪಡೆದಿದ್ದರು.
ಕೊಲೆ ಮಾಡುವ ಉದ್ದೇಶದಿಂದಲೇ ಲಾಡ್ಜ್ಗೆ ಹೆಂಡತಿಯನ್ನು ಕರೆದುಕೊಂಡು ಬಂದಿದ್ದ ಬಾಬು, ಬ್ಯಾಗ್ನಲ್ಲಿ ಮಚ್ಚನ್ನೂ ತಂದಿದ್ದ. ಈ ಬಗ್ಗೆ ಅರಿವಿರದ ಪತ್ನಿ ಖುಷಿಯಿಂದಲೇ ಬಂದಿದ್ದಳು. ಕೆಲವೇ ಕ್ಷಣದಲ್ಲಿ ಮಚ್ಚಿನಿಂದ ಪತ್ನಿಯ ಕಾಲನ್ನು ಕತ್ತರಿ, ಬಳಿಕ ತನ್ನ ಹೊಟ್ಟೆಗೆ ಚಾಕು ಚುಚ್ಚಿಕೊಂಡಿದ್ದಾನೆ. ಈ ಘಟನೆ ಸಂಬಂಧ ಕೂಡಲೇಹೋಟೆಲ್ ಮಾಲೀಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ರಕ್ತದಮಡುವಿನಲ್ಲಿ ಬಿದ್ದಿದ್ದ ಅನಿತಾಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದರು. ಆರೋಪಿ ಬಾಬುನನ್ನು ಬಂಧಿಸಿದ್ದಾರೆ. ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪತ್ನಿಯ ಕಾಲನ್ನು ಕತ್ತರಿಸಿದ್ದರ ಉದ್ದೇಶ? ಯಾವ ಕಾರಣಕ್ಕೆ ಪತ್ನಿಯನ್ನು ಕೊಲ್ಲಲು ಸಂಚು ರೂಪಿಸಿದ್ದ ಎಂಬುದು ತನಿಖೆ ಬಳಿಕ ಗೊತ್ತಾಗಲಿದೆ.
ತುಂಬಾ ದಪ್ಪಗಿದ್ದೀನಿ, ಕ್ಷಮಿಸಿ ಪಪ್ಪಾ… ತಂದೆ ಮೊಬೈಲ್ಗೆ ಸಂದೇಶ ರವಾನೆ: ಬೆಳಗಾಗುವಷ್ಟರಲ್ಲಿ ನಡೆದೇಹೋಯ್ತು ದುರಂತ