More

    ಹೆಂಡ್ತಿ ಹೊಡೀತಿದ್ದಾಳೆ ಅಂತ ಪ್ರಧಾನಿಯ ಮೊರೆ ಹೋದ ಪತಿರಾಯ!

    ಬೆಂಗಳೂರು: ದಿನಬೆಳಗಾದರೆ ಪತಿಯಿಂದ ಕಿರುಕುಳ, ಠಾಣೆ ಮೆಟ್ಟಿಲೇರಿದ ಪತ್ನಿ ಎಂಬ ಸುದ್ದಿಯನ್ನು ಓದುತ್ತಲೇ ಇರುತ್ತೇವೆ. ಆದರೆ ಇಲ್ಲೊಬ್ಬ ಪತಿ, ನನ್ನ ಪತ್ನಿ ಕಿರುಕುಳ ನೀಡುತ್ತಿದ್ದಾಳೆ ಎಂದು ಆರೋಪಿಸಿದ್ದಾನೆ. ಇಷ್ಟಕ್ಕೆ ಸುಮ್ಮನಾಗದೆ ಪ್ರಧಾನಿ ನರೇಂದ್ರ ಮೋದಿಯವರಲ್ಲಿ ಸಹಾಯ ಕೋರಿ ಟ್ವೀಟ್ ಮಾಡಿದ್ದಾನೆ.

    ಯದುನಂದನ ಆಚಾರ್ಯ ಎಂಬಾತ ತನ್ನ ಪತ್ನಿ ಕಿರುಕುಳ ನೀಡುತ್ತಿದ್ದಾಳೆ. ನನ್ನ ಸಹಾಯಕ್ಕೆ ಯಾರೂ ಬರುತ್ತಿಲ್ಲ. ಯಾಕೆಂದರೆ ನಾನೊಬ್ಬ ಮುನುಷ್ಯ. ನನ್ನ ಹೆಂಡತಿ ಚಾಕುವಿನಿಂದ ಹಲ್ಲೆ ಮಾಡಿದ್ದಾಳೆ. ಇದಕ್ಕಾಗಿ ನಾನು ಅವಳ ಮೇಲೆ ಕೌಟುಂಬಿಕ ದೌರ್ಜನ್ಯ ಪ್ರಕರಣ ದಾಖಲಿಸಬಹುದಲ್ಲವೇ ಎಂದು ಟ್ವೀಟ್ ಮಾಡಿದ್ದಾನೆ.

    ಪ್ರಧಾನಿ ಮೋದಿ, ಕೇಂದ್ರ ಕಾನೂನು ಮಂತ್ರಿ ಕಿರಣ್ ರಿಜು ಹಾಗೂ ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರಿಗೆ ಟ್ವೀಟ್ ಮಾಡಿ ತನ್ನ ಅಳಲು ತೋಡಿಕೊಂಡಿದ್ದಾನೆ.

    ಯದುನಂದನ ಆಚಾರ್ಯ ಮಾಡಿರುವ ಟ್ವೀಟ್​ಗೆ ಬೆಂಗಳೂರು ನಗರ ಪೊಲೀಸರು ಪ್ರತಿಕ್ರಿಯಿಸಿದ್ದು, ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಿ ಎಂದಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts