ಬೆಳಗಾವಿ: ರಾಜ್ಯದಲ್ಲಿ ಶೀಘ್ರವೇ ಅತ್ಯಂತ ರಚನಾತ್ಮಕ ‘ಉದ್ಯೋಗ ನೀತಿ’ ಜಾರಿಗೆ ತರಲಾಗುವುದು. ಉದ್ಯೋಗ ಸೃಷ್ಟಿಗೆ ಒತ್ತು ನೀಡಿ, ನಿರುದ್ಯೋಗ ಸಮಸ್ಯೆ ನಿವಾರಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು.
ಗೋಗಟೆ ಇಂಜಿನಿಯರಿಂಗ್ ಮಹಾವಿದ್ಯಾಲಯ ಆವರಣದಲ್ಲಿ ಕೌಶಲಾಭಿವೃದ್ಧಿ ನಿಗಮವು ಗುರುವಾರ ಹಮ್ಮಿಕೊಂಡಿದ್ದ ‘ಸರ್ವರಿಗೂ ಉದ್ಯೋಗ’ ಕಾರ್ಯಕ್ರಮ ಲೋಕಾರ್ಪಣೆ ಮತ್ತು ‘ಬೃಹತ್ ಉದ್ಯೋಗ ಮೇಳ’ ಉದ್ಘಾಟಿಸಿ ಸಿಎಂ ಮಾತನಾಡಿದರು.
ಐಟಿ, ಬಿಟಿ ಮತ್ತು ಕೌಶಲಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿ, ಪ್ರತಿ ವಿದ್ಯಾವಂತರಿಗೂ ಅವರ ಆಸಕ್ತಿಗನುಸಾರ ಉದ್ಯೋಗಗಳೇ ದೊರಕುವಂತಾಗಬೇಕು ಎನ್ನುವುದು ಸರ್ಕಾರದ ಸಂಕಲ್ಪ. ಈ ಮಹತ್ವಾಕ್ಷಾಂಕ್ಷಿಯಿಂದಲೇ ‘ಸಕಲರಿಗೂ ಉದ್ಯೋಗ’ ಕಾರ್ಯಕ್ರಮ ರೂಪಿಸಲಾಗಿದೆ ಎಂದರು.
ಬೆಳಗಾವಿಯಲ್ಲಿ ಈಗಾಗಲೇ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಕೇಂದ್ರ ಕಚೇರಿ ಇದೆ. ರಾಜ್ಯದ ಒಟ್ಟು 6 ವಿವಿಗಳನ್ನು ಯೂನಿವರ್ಸಿಟಿ ಆಫ್ ಎಮಿನೆನ್ಸ್ ಮಟ್ಟಕ್ಕೆ ಮತ್ತು 7 ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್ಗಳನ್ನು ಐಐಟಿ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು. ವಿಟಿಯು ಅಭಿವೃದ್ಧಿಗೆ ಸಂಬಂಧಿಸಿದ ಕ್ರಿಯಾ ಯೋಜನೆ ಕೇವಲ ಒಂದೇ ತಿಂಗಳಲ್ಲಿ ಸಿದ್ಧವಾಗಲಿದೆ ಎಂದು ತಿಳಿಸಿದರು.
ಉದ್ಯೋಗ ಮೇಳದಲ್ಲಿ ಬೆಳಗಾವಿ, ಧಾರವಾಡ, ಗದಗ, ವಿಜಯಪುರ, ಬಾಗಲಕೋಟೆ, ಉತ್ತರ ಕನ್ನಡ ಹಾಗೂ ಇನ್ನಿತರ ಜಿಲ್ಲೆಗಳ 5 ಸಾವಿರಕ್ಕೂ ಹೆಚ್ಚು ಬಿಇ, ಡಿಪ್ಲೊಮಾ ಮತ್ತು ಐಟಿಐ ಪದವೀಧರರು ಪಾಲ್ಗೊಂಡಿದ್ದರು.
57 ಕಂಪನಿಗಳು ನೇರವಾಗಿ ಪಾಲ್ಗೊಂಡಿದ್ದವು. ಟಾಟಾ ಕಮ್ಯುನಿಕೇಶನ್ಸ್, ಹಿಮಾಲಯ ವೆಲ್ನೆಸ್ ಕಂಪನಿ, ಎಲ್.ಡಿ.ಸ್ಕವೇರ್ ಇಂಡಿಯಾ, 3ಡಿಎಂ ಏಜನ್ಸಿ, ಎನರ್ಕಾ ಇಂಡಿಯಾ, ಯುನೈಟೆಡ್ ಟೆಲಿಕಾಂ, ಎಚ್ಪಿ., ಓಲಾ, ಎಚ್ಸಿಎಲ್, ವಿಪ್ರೋ, ಬೈಜೂಸ್, ನಾರಾಯಣ ಗ್ರೂಪ್, ಟಾಟಾ ಬಿಜಿನೆಸ್ ಹಬ್ ಲಿ., ಟೊಯೊಟಾ ಹಾಗೂ ಗೆಸ್ ಕಾಪ್ರೋರೇಶನ್ ಲಿಮಿಟೆಡ್ ಸೇರಿದಂತೆ ಅನೇಕ ಹೆಸರಾಂತ ಕಂಪನಿಗಳು ಪಾಲ್ಗೊಂಡಿದ್ದವು. 14 ಕಂಪನಿಗಳು ವರ್ಚುಯಲ್ ಆಗಿ ಪಾಲ್ಗೊಂಡಿದ್ದವು.
25 ಸಾವಿರ ಉದ್ಯೋಗ:31 ಸಾವಿರ ನಿರುದ್ಯೋಗಿಗಳಿಗೆ ಡಿಜಟಲ್ ಸ್ಕಿಲ್ ಟ್ರೇನಿಂಗ್ ನೀಡುವ ಒಡಂಬಡಿಕೆಯನ್ನು ಸರ್ಕಾರದೊಂದಿಗೆ ಮಹೀಂದ್ರಾ ಆ್ಯಂಡ್ ಮಹೀಂದ್ರಾ ನಂದಿ ಫೌಂಡೇಶನ್ ಮಾಡಿಕೊಂಡಿತು. ಜತೆಗೆ ಕ್ವೆಸ್ ಕಾರ್ಪ್ ಲಿಮಿಟೆಡ್ ಸಂಸ್ಥೆಯು 25 ಸಾವಿರ ಅಭ್ಯರ್ಥಿಗಳಿಗೆ ಇದೇ ವರ್ಷದಲ್ಲಿ ಉದ್ಯೋಗ ನೀಡುವ ಒಡಂಬಡಿಕೆ ಮಾಡಿಕೊಂಡಿತು.
29 ವರ್ಷದ ಬಳಿಕ ಕಪ್ಪುಕೋಟ್ ಧರಿಸಿ ವಾದ ಮಂಡಿಸಿದ ಎಸ್ಪಿಎಂ! ಕಿಕ್ಕಿರಿದು ತುಂಬಿದ್ದ ಕೋರ್ಟ್ ಹಾಲ್
ನಂಜನಗೂಡಲ್ಲಿ ಅಪ್ರಾಪ್ತನ ಜತೆ 3 ಮಕ್ಕಳ ತಾಯಿ ಲವ್ವಿಡವ್ವಿ! ಇವಳ ಆಸೆ ಕೇಳಿದ್ರೆ ಬೆಚ್ಚಿಬೀಳ್ತೀರಿ