ಲಕ್ನೊ: ಉತ್ತರ ಪ್ರದೇಶದಲ್ಲಿ ಮತ್ತೆ ಬಿಜೆಪಿ ಸರ್ಕಾರ ರಚನೆಯಾಗಲಿದ್ದು, ಯೋಗಿ ಆದಿತ್ಯನಾಥ್ರ ದರ್ಬಾರ್ ಮುಂದುವರಿಯಲಿದೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಭಾರೀ ಮುಖಭಂಗವಾಗಿದ್ದು, ಸ್ಥಳೀಯ ನಾಯಕತ್ವ ಅಷ್ಟೇ ಅಲ್ಲ, ಹೈಕಮಾಂಡ್ ನಾಯಕತ್ವ ಕೆಲಸ ಫಲಿಸಿಲ್ಲ. ಪ್ರಿಯಾಂಕಾ ಗಾಂಧಿ ಅವರ ತಂತ್ರಗಾರಿಕೆಯೂ ಠುಸ್ ಆಗಿದೆ.
ಪ್ರಿಯಾಂಕಾ ಗಾಂಧಿ ಹೋದ ಕಡೆ ಜನ ಸಾಗರ ಸೇರುತ್ತಿತ್ತು. ಉತ್ತರ ಪ್ರದೇಶಲ್ಲಿ ಭರ್ಜರಿ ಪ್ರಚಾರ ಮಾಡಿದ್ರೂ ಮತದಾರರು ಮಾತ್ರ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮನ್ನಣೆ ನೀಡಿಲಿಲ್ಲ. ಒಟ್ಟು 403 ವಿಧಾನಸಭಾ ಕ್ಷೇತ್ರಗಳ ಪೈಕಿ 2 ಕ್ಷೇತ್ರದಲ್ಲಷ್ಟೇ ಕಾಂಗ್ರೆಸ್ಗೆ ಗೆಲುವಾಗಲಿದೆ. ಈಗಾಗಲೇ 250 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. 2ನೇ ಸ್ಥಾನದಲ್ಲಿರುವ ಸಮಾಜವಾದಿ ಪಕ್ಷಕ್ಕೆ 125 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಗೋವಾದಲ್ಲಿ ಸರಳ ಬಹುಮತದತ್ತ ಬಿಜೆಪಿ, ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವ ಖುಷಿಯಲ್ಲಿ ಕಮಲ ಪಡೆ
ತುಮಕೂರು ಮಾಜಿ ಕಾರ್ಪೋರೇಟರ್ನ ಕಾಮದಾಹಕ್ಕೆ ಯುವತಿ ಬಲಿ! ಬೆಚ್ಚಿಬೀಳಿಸುತ್ತೆ ಕೊನೇ ಕ್ಷಣದಲ್ಲಿ ಆಕೆ ಬಾಯ್ಬಿಟ್ಟ ರಹಸ್ಯ