ಪಟನಾ: ಬಿಹಾರದಲ್ಲಿ ನಿತೀಶ್ ಕುಮಾರ್ ನೇತೃತ್ವದ ಹೊಸ ಸರ್ಕಾರ ರಚನೆಯಾಗಿದೆ. ಅತ್ಯಂತ ಕಡಿಮೆ ಮತದಲ್ಲಿ ಮುನ್ನಡೆ ಸಾಧಿಸಿದ ಎನ್ಡಿಎ ಸರ್ಕಾರದ ಬಗ್ಗೆ ವಿರೋಧ ಪಕ್ಷಗಳು ಸಾಲು ಸಾಲು ದೂರು ನೀಡಲಾರಂಭಿಸಿದೆ. ಆಡಳಿತ ಪಕ್ಷದ ಶಾಸಕರೊಬ್ಬರಿಗೆ ರಾಷ್ಟ್ರಗೀತೆಯೇ ಬರುವುದಿಲ್ಲ ಎನ್ನುವ ದೂರನ್ನೂ ಮಾಡಿದೆ. ಅದಕ್ಕೆ ಸಾಕ್ಷಿಯಾಗಿ ಶಾಸಕರು ತಪ್ಪಾಗಿ ರಾಷ್ಟ್ರಗೀತೆ ಹಾಡುವ ವಿಡಿಯೋವನ್ನೂ ಶೇರ್ ಮಾಡಲಾಗಿದೆ.
ಇದನ್ನೂ ಓದಿ: ಬಿಹಾರದ ನಿತೀಶ್ ಸರ್ಕಾರದಲ್ಲಿ ಮೊದಲ ವಿಕೆಟ್ ಪತನ; ಎನ್ಡಿಎಗೆ ಬಂತು ಸಂಕಷ್ಟ
ಎನ್ಡಿಎ ಸರ್ಕಾರದ ಶಿಕ್ಷಣ ಸಚಿವರಾಗಿ ಮೇವಾಲಾಲ್ ಚೌಧರಿ ಅವರು ಪ್ರಮಾಣ ವಚನ ಸ್ವೀಕರಿಸಿದ್ದರು. ಆದರೆ ಅವರ ಮೇಲೆ 2017ರ ಭ್ರಷ್ಟಾಚಾರ ಆರೋಪವಿರುವ ಹಿನ್ನೆಲೆ ಅವರಿಗೆ ಸಚಿವ ಸ್ಥಾನ ಕೊಡುವಂತಿಲ್ಲ ಎಂದು ವಿರೋಧ ಪಕ್ಷಗಳು ಒತ್ತಾಯಿಸಿದ್ದವು. ಅದರ ಬೆನ್ನಲ್ಲೇ ಮೇವಾಲಾಲ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಕೂಡ. ಆದರೆ ಇದೀಗ ಅವರೇ ಮತ್ತೊಮ್ಮೆ ಜನರ ಆಕ್ರೋಶಕ್ಕೆ ಕಾರಣರಾಗಿದ್ದಾರೆ.
ನಿಜ ಹೇಳಬೇಕೆಂದರೆ ಮೇವಾಲಾಲ್ ಅವರಿಗೆ ನಮ್ಮ ರಾಷ್ಟ್ರಗೀತೆಯೇ ಬರುವುದಿಲ್ಲ. ಯಾವುದೋ ಗ್ರಾಮದಲ್ಲಿ ಧ್ವಜಾರೋಹಣ ಮಾಡಿದ ಅವರು ರಾಷ್ಟ್ರಗೀತೆ ಹಾಡಿದ್ದಾರೆ. ಅವರು ಹಾಡಿರುವ ಗೀತೆಯನ್ನು ಕೇಳಿದರೆ, ಅವರಿಗೆ ರಾಷ್ಟ್ರಗೀತೆ ಬರುವುದಿಲ್ಲ ಎನ್ನುವುದನ್ನು ಯಾರಾರದೂ ಹೇಳುವಂತಿದೆ. ಆ ವಿಡಿಯೋವನ್ನು ಇದೀಗ ವಿರೋಧ ಪಕ್ಷವಾದ ಆರ್ಜೆಡಿ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದೆ.
ಇದನ್ನೂ ಓದಿ: ಅತ್ಯಾಚಾರ ವಿರೋಧಿಸಿದ್ದಕ್ಕೆ ಮೂಗನ್ನೇ ಕತ್ತರಿಸಿದರು
‘ಹಗರಣಗಳ ಗೂಡಾಗಿರುವ ಶಿಕ್ಷಣ ಸಚಿವ ಮೇವಾಲಾಲ್ ಅವರಿಗೆ ರಾಷ್ಟ್ರಗೀತೆಯೇ ಬರುವುದಿಲ್ಲ. ನಿತೀಶ್ ಕುಮಾರ್ ಅವರಿಗೆ ನಿಮಗೆ ಇದಕ್ಕಿಂತ ಇನ್ನೂ ಅವಮಾನ ಆಗುವುದು ಬಾಕಿಯಿದೆಯೇ?’ ನಿಮ್ಮ ಆತ್ಮಸಾಕ್ಷಿ ಎಲ್ಲಿ ಮುಳುಗಿ ಹೋಗಿದೆ? ಎಂದು ಆರ್ಜೆಡಿ ಪ್ರಶ್ನಿಸಿದೆ. (ಏಜೆನ್ಸೀಸ್)
भ्रष्टाचार के अनेक मामलों के आरोपी बिहार के शिक्षा मंत्री मेवालाल चौधरी को राष्ट्रगान भी नहीं आता।
नीतीश कुमार जी शर्म बची है क्या? अंतरात्मा कहाँ डुबा दी? pic.twitter.com/vHYZ8oRUVZ
— Rashtriya Janata Dal (@RJDforIndia) November 18, 2020
ಮುಂಬೈನಲ್ಲಿ ಶಿವಸೇನೆಗೆ ಉಲ್ಟಾ ಹೊಡೆದ ಕಾಂಗ್ರೆಸ್; ಸ್ವತಂತ್ರವಾಗಿ ಸ್ಪರ್ಧಿಸೋಕೆ ಕಾಂಗ್ರೆಸ್ ರೆಡಿ
ರೈಲಿನ ಮೇಲೆ ಸೆಲ್ಫೀಗೆ ಫೋಸ್ ಕೊಡುತ್ತಿದ್ದ ಬಾಲಕ ವಿದ್ಯುತ್ ತಗುಲಿ ಸತ್ತೇ ಹೋದ