ಮಂಡ್ಯ: ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಹಳೇ ಮೈಸೂರು ಪ್ರಾಂತ್ಯದಲ್ಲಿ ಜೆಡಿಎಸ್ ಪ್ರಾಬಲ್ಯ ಕುಸಿದಿದೆ.
ಕಳೆದ ಬಾರಿ ಮಂಡ್ಯ, ಮೈಸೂರು, ಕೋಲಾರ, ತುಮಕೂರು ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದ್ದ ಜೆಡಿಎಸ್, ಈ ಬಾರಿ ಹಾಸನದಲ್ಲಿ ಮಾತ್ರವೇ ಗೆದ್ದು ಇನ್ನೂ ಮೂರು ಸ್ಥಾನ ಕಳೆದುಕೊಂಡಿದೆ. ಹಾಸನದಲ್ಲಿ ನಿರೀಕ್ಷೆಯಂತೆಯೇ ಸೂರಜ್ ರೇವಣ್ಣ ಗೆದ್ದಿದ್ದಾರೆ. ಆದರೆ, ಮಂಡ್ಯದಲ್ಲಿ ಜೆಡಿಎಸ್ಗೆ ತೀವ್ರ ಮುಖಭಂಗ ಉಂಟಾಗಿದೆ.
ಜೆಡಿಎಸ್ನ ಭದ್ರಕೋಟೆ ಎಂದೇ ಗುರುತಿಸಲ್ಪಿಟ್ಟಿದ್ದ ಮಂಡ್ಯದಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸೋತಿದ್ದರು. ಮಂಡ್ಯದಲ್ಲಿ ಮತ್ತೆ ಹಿಡಿತ ಸಾಧಿಸಲು ಯತ್ನಿಸುತ್ತಿರುವ ಜೆಡಿಎಸ್ ನಾಯಕರು ಪದೇಪದೆ ಆ ಸೋಲಿನ ಕಹಿಯನ್ನ ನೆನಪಿಸಿಕೊಳ್ಳುತ್ತಾ ಈ ಬಾರಿ ಪರಿಷತ್ ಸ್ಥಾನವನ್ನ ಶತಾಯಗತಾಯ ಜೆಡಿಎಸ್ ಪಾಲಾಗಿಸಿಕೊಳ್ಳಬೇಕೆಂದು ಶ್ರಮಿಸಿದ್ದರು. ಆದರೆ, ಇದು ಫಲಿಸಲಿಲ್ಲ. ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಗೂಳಿಗೌಡ ವಿರುದ್ಧ ಜೆಡಿಎಸ್ ಅಭ್ಯರ್ಥಿ ಎನ್.ಅಪ್ಪಾಜಿಗೌಡ ಸೋತಿದ್ದಾರೆ. ದಿನೇಶ್ ಗೂಳಿಗೌಡ 2044 ಮತಗಳನ್ನು ಪಡೆದರೆ, ಜೆಡಿಎಸ್ ಅಭ್ಯರ್ಥಿ 1877 ಮತ ಪಡೆದಿದ್ದಾರೆ. ಒಟ್ಟು 167 ಮತಗಳ ಅಂತರದಲ್ಲಿ ಕಾಂಗ್ರೆಸ್ ಗೆದ್ದಿದೆ.
ಮಂಡ್ಯದಲ್ಲಿ ಚಲಾವಣೆಯಾಗಿದ್ದ ಒಟ್ಟು ಮತ- 4018
ಕಾಂಗ್ರೆಸ್ಗೆ- 2044 ಮತ
ಜೆಡಿಎಸ್- 1877 ಮತ
ಬಿಜೆಪಿ- 50 ಮತ
ಪಕ್ಷೇತರ- 02 ಮತ
ತಿರಸ್ಕೃತ- 46 ಮತ
167 ಮತಗಳ ಅಂತರದಲ್ಲಿ ಕಾಂಗ್ರೆಸ್ ಗೆಲುವು
ಮಂಡ್ಯದಲ್ಲಿ ಹಾಲಿ ಸದಸ್ಯರೇ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಹಿನ್ನೆಲೆ ಅಭ್ಯರ್ಥಿಗಳ ಆಯ್ಕೆ ಮಾಡಲು ದಳಪತಿಗಳು ತೀವ್ರ ಕಸರತ್ತು ನಡೆಸಿದ್ದರು. ಆದರೂ ಕಾಂಗ್ರೆಸ್ ಅಭ್ಯರ್ಥಿಗೆ ಜೆಡಿಎಸ್ ತೀವ್ರ ಪೈಪೋಟಿ ಕೊಟ್ಟಿದ್ದಂತೂ ಸುಳ್ಳಲ್ಲ.
ಬೆಂಗಳೂರಲ್ಲಿ ಸಾವಿರ ಕೋಟಿ ಒಡೆಯ ಕೆಜಿಎಫ್ ಬಾಬುಗೆ ಸೋಲು! ಪರಿಷತ್ ಚುನಾವಣೆಯಲ್ಲಿ ಗೆದ್ದು ಬೀಗಿದ ಬಿಜೆಪಿ
ಬೇರೆ ಬೇರೆ ಮದ್ವೆ ಆಗಿದ್ರೂ ಮಾಗಡಿಯಲ್ಲಿ ದುರಂತ ಅಂತ್ಯ ಕಂಡ ಜೋಡಿ! ಗರ್ಭಿಣಿ ಪತ್ನಿಯ ಗೋಳಾಟ ನೋಡಲಾಗ್ತಿಲ್ಲ…