ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಕುರಿತು ಟ್ವೀಟ್ ಮೂಲಕ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ.
ಹಣ ಬಲ ಮತ್ತು ಜನ ಬಲದ ನಡುವಿನ ಹೋರಾಟದಲ್ಲಿ ಜನ ಬಲಕ್ಕೆ ಸೋಲಾಗಿರುವುದು ಬೇಸರ ತಂದಿದೆ. ರಾಷ್ಟ್ರೀಯ ಪಕ್ಷಗಳ ಹಣದ ಅಬ್ಬರದಲ್ಲಿ ನಾವು ಹಿನ್ನಡೆ ಅನುಭವಿಸಿದ್ದೇವೆ. ಆಣೆ, ಪ್ರಮಾಣಗಳ ನಡುವೆಯೂ ನೈತಿಕ ನೆಲೆಯಲ್ಲಿ ಸೆಣಸಿದ್ದೇವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಈ ಚುನಾವಣೆಯ ಮತದಾರರು. ಜನರೇ ನೇರವಾಗಿ ಹಕ್ಕು ಚಲಾಯಿಸುವ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಶಕ್ತಿ ಏನೆಂಬುದು ತಿಳಿಯಲಿದೆ. ಪಕ್ಷ ಮತ್ತೆ ಪುಟಿದೆದ್ದು ಬರಲಿದೆ. ಜನರಲ್ಲಿ ಜೆಡಿಎಸ್ ಬಗೆಗಿನ ವಿಶ್ವಾಸವನ್ನು ಅಳಿಸಲಾಗದು ಎಂದಿರುವ ಎಚ್ಡಿಕೆ, ಚುನಾವಣೆಯಲ್ಲಿ ಜಯ ಗಳಿಸಿದ ಎಲ್ಲ ಪಕ್ಷಗಳ ಅಭ್ಯರ್ಥಿಗಳಿಗೆ ಶುಭಾಶಯ ತಿಳಿಸಿದ್ದಾರೆ.
ಚುನಾವಣೆ ಎಂದರೆ ಸೋಲು-ಗೆಲುವು. ಗೆಲುವಿಗಾಗಿ ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ. ಅವರೇ ನಮ್ಮ ಶಕ್ತಿ. ಅವರೆಲ್ಲರಿಗೂ ನನ್ನ ಕೃತಜ್ಞತೆಗಳು. ಈಗ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡುತ್ತಿದ್ದೇವೆ. ಹಣಬಲದಿಂದ ಎದುರಾಗುವ ಇಂಥ ಸೋಲುಗಳಿಗೆ ಜೆಡಿಎಸ್ ಎಂದೂ ಧೃತಿಗೆಡುವುದಿಲ್ಲ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
2023ರ ವಿಧಾನಸಭೆ ಚುನಾವಣೆಯೇ ನಮ್ಮ ಗುರಿ ಎಂದು ಹಿಂದೆಯೇ ಹೇಳಿದ್ದೇನೆ. ಈಗಲೂ ಅದನ್ನೇ ಹೇಳುತ್ತಿದ್ದೇನೆ. ಆ ನಿಟ್ಟಿನಲ್ಲಿ ನಮ್ಮ ತಯಾರಿ ನಡೆದಿದೆ. ಆದರೂ ಈ ಚುನಾವಣೆಯಲ್ಲಿ ಪ್ರಯತ್ನ ಮಾಡಿದ್ದೇವೆ. ʼದೊಡ್ಡ ಪಕ್ಷಗಳ ಕಾಂಚಾಣ ಹಂಚಿಕೆʼ ನಡುವೆ ನಾವು ಹಿಂದೆ ಬಿದ್ದಿದ್ದೇವೆ. 2/5
— H D Kumaraswamy (@hd_kumaraswamy) December 14, 2021
2023ರ ವಿಧಾನಸಭೆ ಚುನಾವಣೆಯೇ ನಮ್ಮ ಗುರಿ ಎಂದು ಹಿಂದೆಯೇ ಹೇಳಿದ್ದೇನೆ. ಈಗಲೂ ಅದನ್ನೇ ಹೇಳುತ್ತಿದ್ದೇನೆ. ಆ ನಿಟ್ಟಿನಲ್ಲಿ ನಮ್ಮ ತಯಾರಿ ನಡೆದಿದೆ. ಆದರೂ ಈ ಚುನಾವಣೆಯಲ್ಲಿ ಪ್ರಯತ್ನ ಮಾಡಿದ್ದೇವೆ. ‘ದೊಡ್ಡ ಪಕ್ಷಗಳ ಕಾಂಚಾಣ ಹಂಚಿಕೆʼನಡುವೆ ನಾವು ಹಿಂದೆ ಬಿದ್ದಿದ್ದೇವೆ ಎಂದು ಸರಣಿ ಟ್ವೀಟ್ ಮಾಡಿ ಅಸಮಾಧಾನ ಹೊರಹಾಕಿದ್ದಾರೆ.
ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ಗೆ ಆಘಾತ: ಮಂಡ್ಯದಲ್ಲೂ ತೀವ್ರ ಮುಖಭಂಗ
ಸೂರಜ್ ರೇವಣ್ಣಗೆ ಭರ್ಜರಿ ಗೆಲುವು: ಮಾಜಿ ಪ್ರಧಾನಿ ದೇವೇಗೌಡರ 3ನೇ ಕುಡಿ ವಿಧಾನಸೌಧ ಪ್ರವೇಶ
ಬೇರೆ ಬೇರೆ ಮದ್ವೆ ಆಗಿದ್ರೂ ಮಾಗಡಿಯಲ್ಲಿ ದುರಂತ ಅಂತ್ಯ ಕಂಡ ಜೋಡಿ! ಗರ್ಭಿಣಿ ಪತ್ನಿಯ ಗೋಳಾಟ ನೋಡಲಾಗ್ತಿಲ್ಲ…