ಬೆಂಗಳೂರು: ರಾಜ್ಯದ ಮುಂಬರುವ ಸಾರ್ವತ್ರಿಕ ಚುನಾವಣೆಯ ದಿಕ್ಸೂಚಿ ಎಂದೇ ಬಿಂಬಿತವಾಗುತ್ತಿರುವ ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಬಹಿರಂಗ ಪ್ರಚಾರದ ಕೊನೇ ದಿನವಾದ ಬುಧವಾರ ಎರಡೂ ಕ್ಷೇತ್ರಗಳಲ್ಲಿ ಮೂರೂ ಪಕ್ಷಗಳ ನಾಯಕರು ಅಬ್ಬರದ ಪ್ರಚಾರ ನಡೆಸಿದರು. ಮೂರೂ ಪಕ್ಷಗಳ ನಾಯಕರು ಕರೊನಾ ಮೂರನೇ ಅಲೆ ಆತಂಕವನ್ನು ಮರೆಮಾಚಿ ಭರ್ಜರಿ ರೋಡ್ ಶೋ ನಡೆಸಿ ಮತಯಾಚಿಸಿದರು.
ಎರಡೂ ಕ್ಷೇತ್ರಗಳಿಗೆ ಅ.30ರಂದು ಮತದಾನ ನಡೆಯಲಿದೆ. ಮಾದರಿ ನೀತಿ ಸಂಹಿತೆ ಪ್ರಕಾರ ಮತದಾನಕ್ಕೆ 72 ತಾಸುಗಳ ಮುಂಚೆ ಬಹಿರಂಗ ಪ್ರಚಾರ ಕೊನೆಗೊಂಡಿದೆ. ಹೀಗಾಗಿ ಕಳೆದ 15 ದಿನಗಳಿಂದ ಕ್ಷೇತ್ರದಲ್ಲಿ ಬೀಡುಬಿಟ್ಟಿದ್ದ ಹೊರಗಿನವರು ಬುಧವಾರ ಸಂಜೆ ವೇಳೆಗೆ ಗಂಟೆ-ಮೂಟೆ ಕಟ್ಟಿಕೊಂಡು ಜಾಗ ಖಾಲಿ ಮಾಡುತ್ತಿದ್ದಾರೆ.
ಇನ್ನು ಕೊನೇ ಹಂತದ ಕಸರತ್ತು ಎಂಬಂತೆ ಮನೆಮನೆಗೆ ತೆರಳಿ ಮತಯಾಚನೆ ಮಾಡುವತ್ತ ಎಲ್ಲ ಅಭ್ಯರ್ಥಿಗಳು ಮತ್ತು ಬೆಂಬಲಿಗರು ಗಮನ ಹರಿಸಿದ್ದಾರೆ.
ಮಿಸ್ ಯೂ ಫ್ರೆಂಡ್ಸ್, ನಾನು ಸಾಯುವೆ, ನನ್ನ ಬ್ಯಾನರ್ ಹಾಕಿ… ಎಂದು ಸಂದೇಶ ಕಳಿಸಿ ಪ್ರಾಣಬಿಟ್ಟ ವಿದ್ಯಾರ್ಥಿ
ಅಣ್ಣನಿಂದಲೇ ಕೊಲೆಯಾದ ನವವಿವಾಹಿತೆ! ಮೊದಲೇ ನೊಂದಿದ್ದ ಆ ಜೀವಕ್ಕೆ ಬದುಕಲು ಬಿಡಲೇ ಇಲ್ಲ…
ಆ ಒಂದು ಮಾತಿಗೆ ಆಕೆಯ ಉಸಿರನ್ನೇ ನಿಲ್ಲಿಸಿ ತಾನೂ ಸತ್ತ… ಛೇ ಇದೆಂಥಾ ಪ್ರೀತಿ?