ಬಳ್ಳಾರಿ: ಮಹಾಮಾರಿ ಕರೊನಾ ಸೋಂಕಿಗೆ ವಿಮ್ಸ್ ಆಸ್ಪತ್ರೆಯ ವೈದ್ಯರೊಬ್ಬರು ಬಲಿಯಾಗಿದ್ದಾರೆ.
ಡಾ. ವಿಜಯಶಂಕರ್(52) ಮೃತರು. ವಿಮ್ಸ್ ಆಸ್ಪತ್ರೆಯಲ್ಲಿ ಚರ್ಮರೋಗ ತಜ್ಞರಾಗಿದ್ದ ವಿಜಯಶಂಕರ್ಗೆ ಕಳೆದ ವಾರದಿಂದ ಕರೊನಾ ಸೋಂಕು ತಗುಲಿತ್ತು.
ಕೆಲ ದಿನಗಳ ಕಾಲ ಹೋಮ್ ಐಸೋಲೇಷನ್ನಲ್ಲಿದ್ದ ಡಾ.ವಿಜಯ್ ಶಂಕರ್ ಅವರು ನಗರದ ಆರಾಧನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶ್ವಾಸಕೋಶ ಸಮಸ್ಯೆ ಹೆಚ್ಚಾಗಿ ಕಾಣಿಸಿಕೊಂಡು ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಡಾ.ವಿಜಯ ಶಂಕರ್ ಅವರನ್ನು ಬೆಂಗಳೂರಿನ ನಾರಾಯಣ ಹೃದಯಾಲಯದ ಕೋವಿಡ್ ಕೇರ್ ಸೆಂಟರ್ಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಬುಧವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಡಾ. ವಿಜಯ ಶಂಕರ್ ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ.
ಬೆತ್ತಲೆ ಸ್ಥಿತಿಯಲ್ಲೇ ಕಂಬದಲ್ಲಿ ನೇತಾಡುತ್ತಿದ್ದ ಮಹಿಳೆ! ಬೆಳ್ಳಂಬೆಳಗ್ಗೆ ನಡೆದ ಈ ಕೃತ್ಯ ಕೇಳಿದ್ರೆ ಬೆಚ್ಚಿಬೀಳ್ತೀರಿ