More

    ತೆಪ್ಪ ಮಗುಚಿ ಮಹಿಳೆ ಮೃತ್ಯು: ಈಜಿ ಬಚಾವಾದರು ಇಬ್ಬರು

    ಕಡಬ: ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದ ಏಣಿತ್ತಡ್ಕ ಎಂಬಲ್ಲಿ ಕುಮಾರಧಾರಾ ನದಿಯಲ್ಲಿ ತೆಪ್ಪ ಮಗುಚಿ ಏಣಿತ್ತಡ್ಕ ನಿವಾಸಿ ಬಾಳಪ್ಪ ನಾಯ್ಕ ಎಂಬುವವರ ಪತ್ನಿ ಗೀತಾ(46) ಮೃತಪಟ್ಟಿದ್ದಾರೆ.

    ಕುಮಾರಧಾರಾ ಹೊಳೆಯ ಇನ್ನೊಂದು ಮಗ್ಗುಲಲ್ಲಿರುವ ಅರೆಲ್ತಡ್ಕ ಎಂಬಲ್ಲಿಂದ ಹುಲ್ಲು ಸಂಗ್ರಹಿಸಿ ಪ್ಲಾಸ್ಟಿಕ್ ಗೋಣಿಚೀಲದಲ್ಲಿ ತುಂಬಿಸಿಕೊಂಡು ಹೊಳೆಯನ್ನು ತೆಪ್ಪದ ಮುಖಾಂತರ ದಾಟುತ್ತಿದ್ದಾಗ ನದಿಯ ಮಧ್ಯಭಾಗಕ್ಕೆ ಬಂದಾಗ ಜೋರಾದ ಗಾಳಿ ಬೀಸಿದ್ದು, ಈ ವೇಳೆ ತೆಪ್ಪ ಮಗುಚಿ ಬಿದ್ದಿದೆ. ತೆಪ್ಪದಲ್ಲಿದ್ದ ಇನ್ನಿಬ್ಬರು ಮಹಿಳೆಯರು ಹುಲ್ಲು ತುಂಬಿದ್ದ ಗೋಣಿಚೀಲದ ಸಹಾಯದಿಂದ ಈಜಿ ದಡ ಸೇರಿದ್ದಾರೆ. ಆದರೆ ಗೀತಾ ನೀರಿನಲ್ಲಿ ಮುಳುಗಿದ್ದಾರೆ. ವಿಷಯ ತಿಳಿದು ನೀರಿಗಿಳಿದ ಸ್ಥಳಿಯರಾದ ರಾಮಕೃಷ್ಣ, ನೇತ್ರಾಕ್ಷ ಮತ್ತಿತರರು ಹುಡುಕಾಡಿದಾಗ ಅದಾಗಲೇ ಮೃತಪಟ್ಟಿದ್ದರು. ಕಡಬ ಠಾಣಾ ಎಎಸ್‌ಐ ಶಿವರಾಮ, ಕಾನ್‌ಸ್ಟೆಬಲ್ ಚಂದನ್ ಸ್ಥಳಕ್ಕಾಗಮಿಸಿ ಪರೀಶಿಲನೆ ನಡೆಸಿದ್ದಾರೆ. ಮೃತರ ಪತಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts