ಸುಬ್ರಹ್ಮಣ್ಯ: ಕುಲ್ಕುಂದದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹವ್ಯಾಸಿ ಯಕ್ಷಗಾನ ಭಾಗವತ ರಾಮಚಂದ್ರ ಅರ್ಬಿತ್ತಾಯ ಮೃತಪಟ್ಟಿದ್ದಾರೆ.
ಶುಕ್ರವಾರ ರಾತ್ರಿ ರಾಮಚಂದ್ರ ಅರ್ಬಿತ್ತಾಯ ಹಾಗೂ ಇವರ ಸಹೋದರ ಇಬ್ಬರೂ ಸ್ಕೂಟರಿನಲ್ಲಿ ಹೋಗುತ್ತಿದ್ದಾಗ ಮಾರ್ಗಮಧ್ಯೆ ಕಡವೆ ಅಡ್ಡ ಬಂದ ಪರಿಣಾಮ ನಿಯಂತ್ರಣ ತಪ್ಪಿದ ಸ್ಕೂಟರ್ ಪಲ್ಟಿಯಾಗಿದೆ. ಗಂಭೀರ ಗಾಯಗೊಂಡ ರಾಮಚಂದ್ರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಹೋದರ ರವಿ ಅವರಿಗೆ ಗಾಯಗೊಂಡಿದ್ದಾರೆ.
ರಾಮಚಂದ್ರ ಅರ್ಬಿತ್ತಾಯ ಅವರು ಹಿರಿಯ ಯಕ್ಷಗಾನ ಗುರು ಹರಿನಾರಾಯಣ ಬೈಪಾಡಿತ್ತಾಯರ ಸೋದರಳಿಯ ಹಾಗೂ ಶಿಷ್ಯ. ಕುಕ್ಕೆ ಸುಬ್ರಹ್ಮಣ್ಯ-ಸುಳ್ಯ ಪರಿಸರದಲ್ಲಿ ಭಜನಾ ಕಾರ್ಯಕ್ರಮಗಳಲ್ಲಿಯೂ ಸಕ್ರಿಯರಾಗಿದ್ದ ರಾಮಚಂದ್ರರು ಕುಮಾರಸ್ವಾಮಿ ಶಾಲೆಯಲ್ಲಿ ಬೋಧಕೇತರ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ತಾಯಿ, ತಂಗಿ ಹಾಗೂ ಸಹೋದರನನ್ನು ಅಗಲಿದ್ದಾರೆ. ಉತ್ತಮ ಕ್ರಿಕೆಟ್, ಶಟ್ಲ್ ಆಟಗಾರರೂ ಆಗಿದ್ದ ರಾಮಚಂದ್ರ ಅರ್ಬಿತ್ತಾಯರೇ ಅವರ ಕುಟುಂಬಕ್ಕೆ ಆಸರೆಯಾಗಿದ್ದರು.
ಬೇಯಿಸಿದ ಮೊಟ್ಟೆ ತಿಂದು ಪ್ರಾಣಬಿಟ್ಟ ಮಹಿಳೆ! ಮೊಟ್ಟೆ ಪ್ರಿಯರನ್ನ ಬೆಚ್ಚಿಬೀಳಿಸುತ್ತೆ ಈ ಘಟನೆ
ಸರ್ವರೂ ಎಚ್ಚರದಿಂದ ಇರಬೇಕು… ಇಂದು ಬೆಳ್ಳಂಬೆಳಗ್ಗೆ ಕಾರ್ಣಿಕ ನುಡಿದ ಮೈಲಾರಸ್ವಾಮಿ