More

    ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿಯಾಗಿ ಯುವಕ ಸಾವು

    ಬೋಗಾದಿ ಜಂಕ್ಷನ್ ಬಳಿಯ ತಿರುವಿನಲ್ಲಿ ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿಯಾಗಿ ಸಾಫ್ಟ್‌ವೇರ್ ಇಂಜಿನಿಯರ್ ಮೃತಪಟ್ಟಿದ್ದಾರೆ.
    ಜಯನಗರ ಬಳಿಯ ಚಿಕ್ಕಹರದನಹಳ್ಳಿ ನಿವಾಸಿ ಮಂಜುನಾಥ್ ಎಂಬುವರ ಪುತ್ರ ಶರತ್(28) ಮೃತಪಟ್ಟವರು.

    ಇವರು ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದರು. ಗುರುವಾರ ಬೆಳಗಿನ ಜಾವ 4ಕ್ಕೆ ಕೆಲಸ ಮುಗಿಸಿ ಮನೆಗೆ ಬೈಕಿನಲ್ಲಿ ಹೊರಟಿದ್ದು, ಹೊರವರ್ತುಲ ರಸ್ತೆಯಲ್ಲಿ ಬರುತ್ತಿದ್ದಾಗ ಬೋಗಾದಿ ಜಂಕ್ಷನ್ ಬಳಿಯ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡ ಬೈಕ್ ವಿಭಜಕಕ್ಕೆ ಡಿಕ್ಕಿಯಾಗಿ, ನಂತರ ರಸ್ತೆ ಬದಿಯ ಮರಕ್ಕೆ ಬಡಿದಿದೆ.

    ತೀವ್ರವಾಗಿ ಗಾಯಗೊಂಡಿದ್ದ ಶರತ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಶರತ್ ಅವರು ಹೆಲ್ಮೆಟ್ ಧರಿಸಿದ್ದರು. ಅಪಘಾತದಲ್ಲಿ ದೇಹದ ಹೊರಭಾಗದಲ್ಲಿ ಹೆಚ್ಚೇನು ಗಾಯಗಳು ಆಗಿರಲಿಲ್ಲ. ಅಪಘಾತದಲ್ಲಿ ಮರಕ್ಕೆ ಎದೆಯ ಭಾಗ ಬಡಿದಿದ್ದರಿಂದ ಹೃದಯಾಘಾತ ಸಂಭವಿಸಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಈ ಸಂಬಂಧ ಕೆ.ಆರ್. ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts