ದಾವಣಗೆರೆ: ಕಾಂಕ್ರೀಟ್ ಮಿಕ್ಸರ್ ಲಾರಿಗೆ ವಿದ್ಯುತ್ ಸ್ಪರ್ಶಿಸಿದ ಹಿನ್ನೆಲೆ ಚಾಲಕ ದುರ್ಮರಣಕ್ಕೀಡಾಗಿರುವ ಘಟನೆ ದಾವಣಗರೆಯಲ್ಲಿ ನಡೆದಿದೆ. ವಿದ್ಯುತ್ ಮೇನ್ ಲೈನ್ಗೆ ಮಿಕ್ಸರ್ ತಗುಲಿದ ಹಿನ್ನೆಲೆಯಲ್ಲಿ ಅವಘಡ ಸಂಬವಿಸಿರುವುದಾಗಿ ಹೇಳಲಾಗಿದೆ.
ಇದನ್ನೂ ಓದಿ: ಮರುಕಳಿಸಿದೆ ನಿರ್ಭಯಾ ಕೇಸ್: ಕಬ್ಬಿಣದ ರಾಡ್ ನೂಕಿಸಿ ಅತ್ಯಾಚಾರ ಎಸಗಿ ಕೊಲೆ!
ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿ ಬಳಿ ಈ ಘಟನೆ ನಡೆದಿದೆ. ವಿಶ್ವನಾಥ (20) ಹೆಸರಿನ ಯುವಕ ಕಾಂಕ್ರೀಟ್ ಮಿಕ್ಸರ್ ಟಬ್ನ್ನು ಲಾರಿಯಲ್ಲಿ ಸಾಗಿಸುತ್ತಿದ್ದ. ಸಾಸ್ವೆಹಳ್ಳಿಯ ಕರ್ನಾಟಕ ಬ್ಯಾಂಕ್ ಸಮೀಪ ಘಟನೆ ಲಾರಿ ಚಲಿಸುವಾಗ ವಿದ್ಯುತ್ ಮೇನ್ ಲೇನ್ಗೆ ಮಿಕ್ಸರ್ ತಗುಲಿದೆ. ಅದರಿಂದ ವಿದ್ಯುತ್ ಪ್ರವಹಿಸಿದ್ದು, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಯುವಕ ಕೆಬಿಆರ್ ಕಂಪನಿಯ ಕಾಂಕ್ರೀಟ್ ಮಿಕ್ಸರ್ ಲಾರಿಗೆ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ಬ್ಯಾಚಲರ್ ಹುಡುಗರಿದ್ದ ಮನೆಯಲ್ಲಿ ವಿವಾಹಿತೆಯ ಶವ!; ಕೆಲಸಕ್ಕೆಂದು ಹೋಗಿದ್ದವಳು ಅಲ್ಲೇಕೆ ಹೋದಳು?
ಪಕ್ಕದ ಮನೆಯವನೊಂದಿಗೇ ಮಹಿಳೆಯ ಲವ್ವಿ ಡವ್ವಿ! ಪ್ರಿಯಕರನ ಕಾಟ ಹೆಚ್ಚಾದ ತಕ್ಷಣ ದರೋಡೆಯ ನಾಟಕ